MANDYA: ಮಂಡ್ಯ ಜಿಲ್ಲೆಯ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಎಸ್.ಪಿ. ಮಂಡ್ಯ ಅವರ ಮಾರ್ಗ ದರ್ಶನದಲ್ಲಿ, ಸಿಪಿಐ ನಾಗಮಂಗಲ ವೃತ್ತ ಹಾಗೂ ಅನೇಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನ್ನೊಳಗೊಂಡ ವಿಶೇಷ ತಂಡ ರಚನೆ ಮಾಡಲಾಗಿದ್ದು, ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿದರಕೆರೆ ಗ್ರಾಮದ ನಿವಾಸಿ ಗಂಗೇಗೌಡರು ಎಂಬುವರ ಮನೆ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು, ಮನೆಯ ಬೀರುವಿನಲ್ಲಿ ಇಟ್ಟಿದ್ದ ಸುಮಾರು 20 ಗ್ರಾಂ ತೂಕದ ಚಿನ್ನಾಭರಣಗಳು ಮತ್ತು ₹97,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಹಿನ್ನೆಲೆಯಲ್ಲಿ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಮೋ.ಸಂ. 43/2025, ಕಲಂ 331(3), 305 ಬಿ.ಎನ್.ಎಸ್. 2023 ಅಡಿಯಲ್ಲಿ ಕಳ್ಳತನ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಗಂಭೀರವಾಗಿ ಕೈಗೆತ್ತಿಕೊಂಡಿದ್ದ ಪೊಲೀಸರು, ವಿಶೇಷ ತಂಡದ ಸಹಾಯದಿಂದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇನ್ನು ಆರೋಪಿಯಿಂದ ವಿಚಾರಣೆ ನಡೆಸಿದಾಗ, ಇತರ ಕಳ್ಳತನಗಳ ವಿವರಗಳು ಬಹಿರಂಗವಾಗಿದ್ದು, ಇದರಿಂದಾಗಿ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬಂದಿವೆ.
ಸದ್ಯ ಪೊಲೀಸರು ಆರೋಪಿಯಿಂದ ಚಿನ್ನಾಭರಣ ಹಾಗೂ ನಗದುವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.