Mandya : ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು..!

MANDYA: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕ್ಯಾತಘಟ್ಟ ಗ್ರಾಮದ ಹಳ್ಳದಲ್ಲಿ ಈಜಲು ಹೋದಂತಹ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಲುಭುಜನಹಳ್ಳಿಯ ನಿವಾಸಿಗಳಾದ ಚೇತನ್‌ (14) ಮತ್ತು ದರ್ಶನ್‌ (15) ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ.

ಇಬ್ಬರೂ ಬಾಲಕರು ಭಾನುವಾರ ಬೆಳಿಗ್ಗೆ ಕ್ಯಾತಘಟ್ಟ ಗ್ರಾಮದಲ್ಲಿರುವ ಹಳ್ಳಕ್ಕೆ ಈಜಲು ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹಳ್ಳದಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ವಿಷಯ ತಿಳಿದು ಕೆಎಂ ದೊಡ್ಡಿ ಪೊಲೀಸ್‌ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದು, ಸ್ಥಳೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Author:

...
Sushmitha N

Copy Editor

prajashakthi tv

share
No Reviews