ಮಂಗಳೂರು : ಭಾರೀ ಮಳೆಯಿಂದ ಗುಡ್ಡ ಕುಸಿತ | ಒಂದೇ ಕುಟುಂಬದ ಮೂವರು ದುರ್ಮರಣ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿಯಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಯೀಮ್ (10), ಪ್ರೇಮ ಪೂಜಾರಿ (60), ಮತ್ತು 1 ವರ್ಷದ ಮಗು ಆರುಷ್ ದಾರುಣವಾಗಿ ಸಾವನ್ನಪ್ಪಿದ್ದಾರೆ

ಭಾರೀ ಮಳೆಯಿಂದ ಗುಡ್ಡ ಕುಸಿದು ಕಾಂತಪ್ಪ ಪೂಜಾರಿ ಎಂಬುವರ ಮನೆಯ ಮೇಲೆ ಬಿದ್ದಿದೆ. ಈ ವೇಳೆ ಮನೆಯೊಳಗೆ ಇದ್ದ ಐವರು ಸಿಲುಕಿದ್ದು, ಸ್ಥಳೀಯರು ನೀಡಿದ ತಕ್ಷಣದ ಮಾಹಿತಿಯ ಮೇರೆಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ತೀವ್ರ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಘಟನೆಯಲ್ಲಿ ತಾಯಿ ಅಶ್ವಿನಿ (31) ತಮ್ಮ ಮಕ್ಕಳನ್ನು ತೋಳಲ್ಲಿ ಹಿಡಿದು 9 ಗಂಟೆಗಳ ಕಾಲ ಬದುಕಿಗಾಗಿ ಹೋರಾಡಿದ್ದು, ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ಹೊರತೆಗೆದು, ತಕ್ಷಣವೇ ಆಕ್ಸಿಜನ್ ವ್ಯವಸ್ಥೆಯೊಂದಿಗೆ ತಾಯಿ ಮಗು ಇಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ, ದುರದೃಷ್ಟವಶಾತ್ ಮಗು ಮಾರ್ಗಮಧ್ಯೆ ಸಾವನ್ನಪ್ಪಿದೆ. ಘಟನೆಯಲ್ಲಿ ಆರ್ಯನ್ (2.5) ಮಣ್ಣಿನ ಅವಶೇಷಗಳಡಿಯಲ್ಲಿ ಸಿಲುಕಿ ಮೃತಪಟ್ಟಿದ್ದು, ಕುಟುಂಬದ ಹಿರಿಯರಾದ ಕಾಂತಪ್ಪ ಪೂಜಾರಿ (65) ಬದುಕುಳಿದಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews