ಗುಬ್ಬಿ : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಬೃಹತ್ ಪ್ರತಿಭಟನೆ ...!

ಗುಬ್ಬಿ : ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್‌ ಮೂಲಕ ರಾಮನಗರಕ್ಕೆ ನೀರು ಹರಿಸುವ ನಿರ್ಧಾರಕ್ಕೆ ವಿರೋಧಿಸಿ ರೈತರು ಇಂದು ಗುಬ್ಬಿಯಲ್ಲಿ ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ 144 ಸೆಕ್ಷನ್‌ ನಿಷೇಧಾಜ್ಞೆ ಹೊರತಾಗಿಯೂ, ಸಾವಿರಾರು ರೈತರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಪ್ರತಿಭಟನಾಕಾರರನ್ನು ಹೊತ್ತೊಯ್ಯಲು ತಂದಿದ್ದ ಸಾರಿಗೆ ಇಲಾಖೆಯ ಬಸ್‌ಗಳ ಗಾಳಿ ತೆಗೆಯುವ ಮೂಲಕ ಪ್ರತಿಭಟನಾಕಾರರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿ ತಡೆಹಿಡಿದ ನಂತರ, ರೈತರು ಹೇಮಾವತಿ ನಾಲೆಯತ್ತ ಹೆದ್ದಾರಿಯಲ್ಲೇ ನಡೆದುಕೊಂಡೇ ಹೋಗ್ತಿದ್ದಾರೆ. ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸ್‌ ಪಡೆ ಹರಸಾಹಸ ಪಟ್ಟಿದ್ದಾರೆ. ಇನ್ನು ಹೆದ್ದಾರಿಯಲ್ಲಿ ಮಣ್ಣು ಸುರಿದು, ಟೈರ್‌ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಕಾಮಗಾರಿ ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

Author:

...
Sushmitha N

Copy Editor

prajashakthi tv

share
No Reviews