MANGALORE : ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಊಟದ ವ್ಯವಸ್ಥೆ

MANGALORE NEWS : ಮಂಗಳೂರು ನಗರದಲ್ಲಿ ಭಾರಿ ಮಳೆಯಿಂದಾಗಿ ಜಲಾವೃತಗೊಂಡ ಪ್ರದೇಶಗಳ ಸಂತ್ರಸ್ತರಿಗೆ ಸಹಾಯ ಹಸ್ತವೊಂದಾಗಿ, ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಇಂದು (ಜೂನ್ 16) ಮಧ್ಯಾಹ್ನದ ಊಟದ ವ್ಯವಸ್ಥೆ ನಡೆಸಲು ನಿರ್ಧರಿಸಿದೆ. ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿರುವ ಕಾರಣ ಜನರಿಗೆ ಅಡುಗೆ ಮಾಡಲು ತೊಂದರೆಯಾಗಿದೆ.

ಈ ಸಂದರ್ಭದಲ್ಲಿ ತೀವ್ರವಾಗಿ ತೊಂದರೆ ಅನುಭವಿಸುತ್ತಿರುವ ಕುಟುಂಬಗಳಿಗಾಗಿ ದೇವಸ್ಥಾನದ ಆವರಣದಲ್ಲಿ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ಸಂತ್ರಸ್ತರು ತಮ್ಮ ಮನೆಯ ಸದಸ್ಯರಿಗೆ ಬೇಕಾದಷ್ಟು ಊಟವನ್ನು ದೇವಸ್ಥಾನಕ್ಕೆ ಬಂದು ತೆಗೆದುಕೊಂಡು ಹೋಗಬಹುದಾಗಿದೆ ಎಂದು ಹೋಗಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಪ್ರಕಟನೆಯಲ್ಲಿ ತಿಳಿಸಿದೆ.

 ಸಂಪರ್ಕಿಸಬಹುದಾದ ಸಂಖ್ಯೆ :

ದಿಲ್ ರಾಜ್ ಆಳ್ವ ಮಂಗಳಾದೇವಿ- 9900512727

ರಾಜೇಂದ್ರ ಚಿಲಿಂಬಿ-9972185251

ಕಿರಣ್ ಕೊಡಿಯಾಲ್ ಬೈಲ್- 7899509356

ಅರುಣ್ ಕದ್ರಿ- 924330380

 

Author:

...
Keerthana J

Copy Editor

prajashakthi tv

share
No Reviews