ಮೈಸೂರು : ಮಿನಿ ಲಾರಿ ಹಾಗೂ ಬೈಕ್ ಭೀಕರ ಅಪಘಾತ | ಇಬ್ಬರು ಯುವಕರು ದುರ್ಮರಣ

ಮೈಸೂರು : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಪಿರಿಯಾಪಟ್ಟಣದ ಗೊರಹಳ್ಳಿ ಕೆರೆ ಬಳಿ ಮಿನಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಈ ಡಿಕ್ಕಿಯಿಂದ ಸ್ಥಳವೇ ಆಘಾತಕರ ವಾತಾವರಣಕ್ಕೆ ಒಳಗಾಯಿತು. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಮಿನಿ ಲಾರಿಗೆ ಬೈಕ್ ಭೀಕರವಾಗಿ ಡಿಕ್ಕಿಯಾದ ಪರಿಣಾಮ, ಅಪಘಾತದ ತೀವ್ರತೆಗೆ ಬೈಕ್​ ಸವಾರನ ರುಂಡವೇ ಹಾರಿಹೋಗಿದೆ. 

 ಇನ್ನು ಮೃತರಾದ ಯುವಕರು ಹಿಟ್ನೆಬಾಗಿಲು ಗ್ರಾಮದ ನಿವಾಸಿಗಳಾಗಿದ್ದು, ದುರ್ಘಟನೆಯ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ಕುರಿತು ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ. ರಸ್ತೆ ಸುರಕ್ಷತೆ ಹಾಗೂ ವೇಗ ನಿಯಂತ್ರಣದ ಬಗ್ಗೆ ಪುನಃ ಚಿಂತನೆ ಮಾಡುವ ಅಗತ್ಯವಿದೆ ಎಂಬ ಮಾತುಗಳು ಸ್ಥಳೀಯರಲ್ಲಿ ಕೇಳಿಬರುತ್ತಿವೆ.

 

Author:

...
Keerthana J

Copy Editor

prajashakthi tv

share
No Reviews