ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ ಅಭಿವೃದ್ಧಿಯತ್ತ ಮತ್ತೊಂದು ಹೆಜ್ಜೆಯಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ₹1,010 ಕೋಟಿ ವೆಚ್ಚದಲ್ಲಿ ರೂಪುಗೊಳ್ಳುತ್ತಿರುವ ನಗರ ಅನಿಲ ವಿತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಪಶ್ಚಿಮ ಬಂಗಾಳದ ಅಲಿಪುರ್ದಾರ್ ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ ನಗರ ಅನಿಲ ವಿತರಣಾ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಲಾಯ್ತು. ಈ ಯೋಜನೆಯ ಮೂಲಕ ರಾಜ್ಯದ ಹಲವಾರು ನಗರಗಳಿಗೆ ನೈಸರ್ಗಿಕ ಅನಿಲ ಸರಬರಾಜು ಮಾಡಲಾಗುವುದು.
ಈ ಯೋಜನೆ ಇಂಧನ ದಕ್ಷತೆ, ಪರಿಸರ ಸ್ನೇಹಿ ಸಂಚಾರ ಹಾಗೂ ಮನೆ ಬಳಕೆಯ ಅನಿಲ ವಿತರಣೆಯಲ್ಲಿ ನೂತನ ಮೆಟ್ಟಿಲು ಹತ್ತಲಿರುವ ಮಹತ್ವದ ಹೆಜ್ಜೆಯಾಗಿದೆ. ಇದರಿಂದ ಸಾರ್ವಜನಿಕರಿಗೆ ಶುದ್ಧ ಇಂಧನ ದೊರೆಯುವಂತಾಗುವುದು ಮಾತ್ರವಲ್ಲದೆ, ಉದ್ಯೋಗ ಸೃಷ್ಟಿಗೂ ಅವಕಾಶ ನೀಡಲಿದೆ. ಈ ಯೋಜನೆಯ ಅನುಷ್ಠಾನದಿಂದ ಪಶ್ಚಿಮ ಬಂಗಾಳದಲ್ಲಿ ಹಸಿರು ಇಂಧನ ಬಳಕೆಯ ದಾರಿ ಬೆಳೆದು, ಪರಿಸರದ ಮೇಲೆ ಒತ್ತಡ ಕಡಿಮೆಯಾಗಲಿದ್ದು, ಸುಧಾರಣೆಯತ್ತ ಮತ್ತೊಂದು ಹೆಜ್ಜೆಯಾಗಲಿದೆ.