PLAN CRASH : ಏರ್ ಇಂಡಿಯಾ [AIR INDIA] ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ [NARENDRA MODI] ಇಂದು ಬೆಳಗ್ಗೆ ಭೇಟಿ ನೀಡಿ, ಘಟನೆಯ ವಿವರಗಳನ್ನು ಅಧಿಕಾರಿಗಳಿಂದ ಪಡೆದರು. ಪ್ರಧಾನಿ ಮೋದಿ, ಇಂದು ಬೆಳಗ್ಗೆ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಮೇಘನಿನಗರ [MEGHANI NAGARA] ಪ್ರದೇಶದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲಿ ತೆರಳಿದರು.
ಇನ್ನು ಘಟನಾ ಸ್ಥಳದಲ್ಲಿ ಪ್ರಧಾನಿ, ರಾಜ್ಯ ಮತ್ತು ಕೇಂದ್ರದ ಹಿರಿಯ ಅಧಿಕಾರಿಗಳೊಂದಿಗೆ ದುರಂತದ ಪರಿಶೀಲನೆ ನಡೆಸಿ, ಮೇಲ್ದರ್ಜೆಯ ಮಾಹಿತಿ ಪಡೆದುಕೊಂಡರು. ಬಳಿಕ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು ಹಾಗೂ ಅವರ ಕುಟುಂಬದವರಿಗೆ ಧೈರ್ಯವನ್ನು ತುಂಬಿದರು.
ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮೊಹೋಲ್, ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಹಾಗೂ ಇತರ ಭದ್ರತಾ ಅಧಿಕಾರಿಗಳು ಪ್ರಧಾನಿ ಅವರಿಗೆ ಜೊತೆಯಾಗಿದ್ದರು.
ಇನ್ನೂ ದುರಂತದ ಬಗ್ಗೆ ನಿನ್ನೆ ಎಕ್ಸ್ ಪೋಸ್ಟ್ ಮೂಲಕ ಸಂತಾಪ ಸೂಚಿಸಿದ್ದ ಪ್ರಧಾನಿ ಮೋದಿ, ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದರು.