RAIN ALERT : ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗ ಮತ್ತು ಮಲೆನಾಡು ಪ್ರದೇಶಗಳು ಕಂಗಾಲಾಗಿದೆ. ಇನ್ನು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಹೈ ಅಲರ್ಟ್ ಘೋಷಿಸಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ, ಬೀದರ್, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ಬೆಂಗಳೂರು ಸೇರಿದಂತೆ ಉಳಿದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಇದರಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣದಿಂದಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಿಷೇಧ ವಿಧಿಸಲಾಗಿದೆ. ನಾಣಚ್ಚಿ ಗೇಟ್, ವೀರನಹೊಸಹಳ್ಳಿ ಗೇಟ್ಗಳಿಂದ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮಳೆ ನಿಲ್ಲುವವರೆಗೆ ಈ ನಿಷೇಧ ಮುಂದುವರಿಯಲಿದೆ. ಆದರೆ, ದಮ್ಮನಕಟ್ಟೆ (ಕಬಿನಿ) ಸಫಾರಿಗೆ ಎಂದಿನಂತೆ ಅನುಮತಿ ಇದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.ಇನ್ನು ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ನಡೆದುಕೊಳ್ಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.