RAIN EFFECT : ಮುಂಗಾರು ಅಬ್ಬರ | ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ದಕ್ಷಿಣ ಕನ್ನಡ : ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಮೇ ತಿಂಗಳಲ್ಲೇ ಪ್ರವೇಶಿಸಿದ್ದು, ಭಾರೀ ಮಳೆ ಅಬ್ಬರ ಮುಂದುವರೆದಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯ ನದಿಗಳು ಈಗಾಗಲೇ ತುಂಬಿ ಹರಿಯುತ್ತಿವೆ. ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಅತಿವೃಷ್ಟಿಯಿಂದ ಪ್ರಸಿದ್ಧ ಧಾರ್ಮಿಕ ತಾಣವಾದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಿಂದಾಗಿ ಮುಳುಗಡೆಯಾಗಿದೆ.

ಇನ್ನು ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೇವಸ್ಥಾನ ಆಡಳಿತ ಮಂಡಳಿಯಿಂದ ಭಕ್ತರಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ ನೀಡಲಾಗಿದೆ. ಭಕ್ತಾದಿಗಳು ಕೇವಲ ನದಿಯ ನೀರನ್ನು ತಲೆಗೆ ಚಿಮುಕಿಸಿಕೊಳ್ಳಲು ಮಾತ್ರ ಅನುಮತಿ ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ಸ್ನಾನಘಟ್ಟದ ಸುತ್ತಮುತ್ತ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭಕ್ತಾಧಿಗಳ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಹಿನ್ನಲೆಯಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ವರ್ತಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಮುಂಗಾರು ಆರಂಭದಲ್ಲಿಯೇ ಸಂಭವಿಸಿದ ಈ ಮಳೆಯ ಅಬ್ಬರ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ, ಕಡಿಮೆಯಾದ ಪ್ರದೇಶಗಳಲ್ಲಿ ಪ್ರವಾಹದ ಅಪಾಯವನ್ನೂ ನಿರಾಕರಿಸಲಾಗದ ಸ್ಥಿತಿಯಿದೆ.

 

Author:

...
Keerthana J

Copy Editor

prajashakthi tv

share
No Reviews