CHIKKABALLAPURA NEWS : ಜೀವನದ ಸಂಕಷ್ಟಗಳಿಗೆ ದಾರಿ ತಪ್ಪಿದ ತಾಯಿ, ಇಬ್ಬರು ಮುದ್ದು ಮಕ್ಕಳನ್ನು ಜಲಸಮಾಧಿ ಮಾಡಿಸಿ, ತಾನೂ ಆತ್ಮಹತ್ಯೆಗೆ [Sucide] ಶರಣಾದ ಘಟನೆ ಚಿಕ್ಕಬಳ್ಳಾಪುರ [Chikkaballapura] ಜಿಲ್ಲೆಯಲ್ಲಿ ನಡೆದಿದೆ. ಈ ದಾರುಣ ಘಟನೆಯು ಸ್ಥಳೀಯರಲ್ಲಿ ಆಘಾತ ಮತ್ತು ದುಃಖ ಮೂಡಿಸಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಬೋದಗಾನಹಳ್ಳಿ[Bodaganahalli] ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಲಾವಣ್ಯ [Lavanya] ಎಂಬ ಮಹಿಳೆ, ಕೌಟುಂಬಿಕ ಕಲಹದಿಂದ ಬೇಸತ್ತು, ತನ್ನ ಇಬ್ಬರು ಮಕ್ಕಳಾದ ನಿಹಾರಿಕಾ (9) ಮತ್ತು ನೇಹಾ (6) ಅವರನ್ನು ರಂಗಧಾಮ ಕೆರೆಗೆ [Rangadhama Lake] ತಳ್ಳಿ, ನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಸ್ಥಳೀಯರು ಈ ಘಟನೆಗೆ ಕೂಡಲೇ ಪ್ರತಿಕ್ರಿಯೆ ನೀಡಿದರೂ, ತಾಯಿ ಮತ್ತು ಮಕ್ಕಳನ್ನು ಉಳಿಸಲು ಸಾಧ್ಯವಾಗಿಲ್ಲ.
ಇನ್ನು ವಿಷಯ ತಿಳಿದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಾಥಮಿಕ ತನಿಖೆ ಕೈಗೊಂಡಿದ್ದು, ಈ ಕೃತ್ಯಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಪ್ರಮುಖ ಕಾರಣ ಎನ್ನಲಾಗಿದೆ. ಆದರೆ ಪೊಲೀಸರು ಪೂರ್ಣ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಮೃತದೇಹಗಳನ್ನು Postmortem ಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣವನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಿಸಲಾಗಿದೆ.