VIJAYANAGARA :ಹೆರಿಗೆಯಾದ ಎರಡೇ ದಿನಕ್ಕೆ ಬಾಣಂತಿ ಸಾವು | ವೈದ್ಯರ ನಿರ್ಲಕ್ಷ್ಯ ಆರೋಪ

ದುರ್ಗಮ್ಮ ಮೃತ ಬಾಣಂತಿ
ದುರ್ಗಮ್ಮ ಮೃತ ಬಾಣಂತಿ
ವಿಜಯನಗರ

VIJAYANAGARA NEWS : ಸಿಸೇರಿಯನ್​ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಎರಡೇ ದಿನದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟ ಘಟನೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

ದುರ್ಗಮ್ಮ (21) ಎಂಬವವರು ಮೃತ ಬಾಣಂತಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ತನ್ನ ತಾಯಿ ಮನೆಗೆ ಹೆರಿಗೆ ಬಂದಿದ್ದ ಅವರಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪೋಷಕರು ತಕ್ಷಣ ಹತ್ತಿರದ ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಹರಪನಹಳ್ಳಿ ವೈದ್ಯರು ಸಿಸೇರಿಯನ್​​ ಮೂಲಕ ಹೆರಿಗೆ ಮಾಡಿಸಿದ್ದರು. ಹೆಣ್ಣು ಮಗು ಜನಿಸಿತ್ತು. ಬಳಿಕ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸಿಸೇರಿಯನ್ ಬಳಿಕ ಹೊಲಿಗೆ ಸರಿ ಹೋದಿಲ್ಲ. ಸಮಯಕ್ಕೆ ಚಿಕಿತ್ಸೆ ಕೊಡಲಿಲ್ಲ. ರಕ್ತಸ್ರಾವದ ಬಗ್ಗೆ ನಮಗೆ ಮುಂಚಿತ ಮಾಹಿತಿ ನೀಡಲಿಲ್ಲ. ನೋಡುವ ಅವಕಾಶವೂ ನೀಡದೆ ನೇರವಾಗಿ ಚಿಗಟೇರಿಗೆ ಕಳಿಸಿದರು. ವೈದ್ಯರ ನಿರ್ಲಕ್ಷ್ಯವೇ ನನ್ನ ಮಗಳ ಸಾವಿಗೆ ಕಾರಣ ಎಂದು ಮೃತಳ ತಾಯಿ ಹುಲಿಗೆಮ್ಮ ಹೇಳಿದ್ದಾರೆ. ಇನ್ನು ಈ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆ ರಾಜ್ಯಮಟ್ಟದ ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

Author:

...
Keerthana J

Copy Editor

prajashakthi tv

share
No Reviews