MYSORE : ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ನಡುವಿನ ರಸ್ತೆಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಹಂಚೀಪುರ ಗ್ರಾಮದ ನಿವಾಸಿ ಚಿಕ್ಕಸ್ವಾಮಿ (45), ಅವರ ಪತ್ನಿ ರೂಪಾ (38) ಹಾಗೂ ಕಣೇನೂರು ಗ್ರಾಮದ ಚನ್ನಮಲ್ಲಮ್ಮ ಎಂಬುವರು ಮೃತ ದುರ್ದೈವಿಯಾಗಿದ್ದಾರೆ.
ದಂಪತಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ವೇಗವಾಗಿ ಬಂದ ಲಾರಿ ಬೈಕ್ ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಮೂವರೂ ಬೈಕ್ ನಿಂದ ರಸ್ತೆ ಮೇಲೆ ಬಿದ್ದಿದ್ದಾರೆ, ಈ ವೇಳೆ, ಲಾರಿಯು ಅವರ ಮೇಲೆ ಹರಿದಿದ್ದು, ಚಕ್ರಕ್ಕೆ ಸಿಲುಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಮೃತದೇಹಗಳನ್ನು ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಇನ್ನು ವಿಷಯ ತಿಳಿದು ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಲಾರಿಯು ತಮಿಳನಾಡು ಮೂಲದ್ದಾಗಿದ್ದು, ಲಾರಿ ಚಾಲಕನನ್ನು ಪೊಲೀಶರು ವಶಕ್ಕೆ ಪಡೆದುಕೊಂಡಿದ್ದಾರೆ.