Nandihills : ಜೂನ್ 19ರಂದು ನಂದಿಗಿರಿ ಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

CHIKKABALLAPURA: ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿಗಿರಿಧಾಮ (Nandi Hills) ಈ ಬಾರಿ ರಾಜಕೀಯ ಕೇಂದ್ರವಾಗಿ ತಾತ್ಕಾಲಿಕವಾಗಿ ಮಾರ್ಪಟ್ಟಿದೆ. ಜೂನ್ 19ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆ (Cabinet Meeting) ಹಿನ್ನೆಲೆಯಲ್ಲಿ, ಸುತ್ತಲೂ ಕಠಿಣ ಭದ್ರತೆ ಏರ್ಪಡಿಸಲಾಗಿದೆ.

ಈ ಹಿನ್ನಲೆಯಲ್ಲಿ ಇಂದು ಸಂಜೆ 5 ಗಂಟೆಯಿಂದ ಜೂನ್‌ 20ರ ಬೆಳಿಗ್ಗೆ 5 ಗಂಟೆವರೆಗೆ ಮೂರು ದಿನಗಳ ಕಾಲ ನಂದಿಗಿರಿಧಾಮ ಪ್ರವೇಶವನ್ನು ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಿಸಿದೆ. ಪ್ರವಾಸಿಗರು ಈ ಅವಧಿಯಲ್ಲಿ ನಂದಿಗಿರಿಗೆ ಆಗಮಿಸದಂತೆ ಸೂಚಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ರಾಜ್ಯದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಇದರಿಂದಾಗಿ ವಿಐಪಿ ಸಂಚಾರ ಹೆಚ್ಚಾಗುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಭದ್ರತೆ ಹಾಗೂ ವಾಹನ ಸಂಚಾರ ನಿಯಂತ್ರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

"ಪ್ರವಾಸಿಗರು ಈ ಮೂರು ದಿನಗಳಲ್ಲಿ ನಂದಿಗಿರಿಗೆ ಆಗಮಿಸುವ ಯೋಜನೆಗಳನ್ನು ಮುಂದೂಡಬೇಕಾಗಿ ವಿನಂತಿಸುತ್ತೇವೆ. ನಿಮ್ಮ ಸಹಕಾರದಿಂದ ಸಚಿವ ಸಂಪುಟ ಸಭೆಯನ್ನು ಶಾಂತಿಯುತವಾಗಿ ಮುಗಿಸಬಹುದು," ಎಂದು ಅಧಿಕಾರಿಗಳು ತಿಳಿಸಿದ್ದಾರೆ

Author:

...
Sushmitha N

Copy Editor

prajashakthi tv

share
No Reviews