ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಖದೀಮರು ಅಂಗಡಿ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ₹11.5 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಅತೀಕ್ ರೆಹಮಾನ್ ಎಂಬುವರಿಗೆ ಸೇರಿದ 11.5 ಲಕ್ಷ ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ, ಈ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಅತೀಕ್ ರೆಹಮಾನ್ ಎಂಬುವರು ದಾಬಸ್ಪೇಟೆಯಲ್ಲಿನ ಬ್ಯಾಂಕ್ನಿಂದ ಹಣ ತೆಗೆದುಕೊಂಡು ಬಂದಿದ್ದರು, ಈ ವೇಳೆ ನೆಲಮಂಗಲದ ಬಳಿ ಕಾರು ನಿಲ್ಲಿಸಿ ಮಿಕ್ಸಿ ರಿಪೇರಿ ಮಾಡಿಸಲು ಬ್ಯಾಗ್ನಲ್ಲಿದ್ದ ಹಣವನ್ನು ಕಾರಿನೊಳಗೆಯೇ ಬಿಟ್ಟು ಅಂಗಡಿಗೆ ತೆರಳಿದ್ದರು.
ಈ ವೇಳೆ ಖದೀಮರು ಕಾರಿನ ಗ್ಲಾಸ್ ಒಡೆದು ಬ್ಯಾಗ್ನಲ್ಲಿದ್ದ ₹11.5 ಲಕ್ಷ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಬಳಿಕ ಅತೀಕ್ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಪೊಲೀಸರ ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.