Newdelhi : ತೋತಾಪುರಿ ಹಣ್ಣಿಗೆ ಆಂಧ್ರದ ನಿರ್ಬಂಧ | ರೈತರ ಸಂಕಷ್ಟಕ್ಕೆ ಸಿದ್ದರಾಮಯ್ಯ ಕೇಂದ್ರದ ಮೊರೆ

NEWDELHI: ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ಹೊಸ ಕಿರಿಕ್ ಶುರುವಾಗಿದೆ. ಇತ್ತೀಚೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಬೆಂಗಳೂರು ಮೂಲದ ಹಿಂದೂಸ್ತಾನ್ ಏರೋನೋಟಿಕ್ಸ್ ಲಿಮಿಟೆಡ್ (HAL) ಅನ್ನು ತಮ್ಮ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂಬ ಆಗ್ರಹವನ್ನಿಟ್ಟು ಭಾರಿ ಚರ್ಚೆಗೆ ಕಾರಣರಾದ್ರು, ಇದೀಗ ಇದರ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರವು ಇದೀಗ ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ನಿರ್ಬಂಧ ಹೇರಿರುವುದು, ರಾಜ್ಯದ ಮಾವಿನ ರೈತರಿಗೆ ತೀವ್ರ ಆರ್ಥಿಕ ಹೊಡೆತ ನೀಡಿದೆ.

ಈ ನಿರ್ಬಂಧವನ್ನು ತೆರವು ಮಾಡುವಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದರು. ಆದರೆ, ಆಂಧ್ರ ಸಿಎಂ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಗದೆ ಇರುವುದರಿಂದ ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮೊರೆ ಹೋಗಿದ್ದಾರೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದು, ತಕ್ಷಣದ ಮಧ್ಯಸ್ಥಿಕೆ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಮಾವು ಬೆಳೆಯುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಪ್ರಸ್ತುತ ಸುಗ್ಗಿಯ ಋತುವಿನಲ್ಲಿ ಮಾರುಕಟ್ಟೆ ಬೆಲೆಗಳಲ್ಲಿ ತೀವ್ರ ಕುಸಿತದಿಂದಾಗಿ ಕರ್ನಾಟಕದಾದ್ಯಂತ ಮಾವಿನ ರೈತರು ಎದುರಿಸುತ್ತಿರುವ ತೀವ್ರ ಸಂಕಷ್ಟದ ಬಗ್ಗೆ ತಕ್ಷಣ ನಿಮ್ಮ ಗಮನ ಸೆಳೆಯಲು ಈ ಪತ್ರವನ್ನು ಬರೆಯುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಇದನ್ನು ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಸಲಾಗುತ್ತದೆ.

ತೋತಾಪುರಿ ಮಾವಿನ ಬೆಲೆ ಕ್ವಿಂಟಾಲ್‌ಗೂ ₹12,000 ರಿಂದ ₹3,000 ಕ್ಕೆ ಕುಸಿತವಾಗಿದ್ದು, ಕೃಷಿ ವೆಚ್ಚ ಕ್ವಿಂಟಾಲ್‌ಗೆ ₹5,466 ಇದ್ದು, ರೈತರು ತಾವು ಬಿತ್ತಿದ ಹಣವನ್ನೇ ಮರುಪಡೆಯಲು ವಿಫಲರಾಗುತ್ತಿದ್ದು, ಸಾವಿರಾರು ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಆದ್ದರಿಂದ ಬೆಲೆ ಕೊರತೆ ಪಾವತಿ ಯೋಜನೆ (PDPS) ಅನ್ನು ತಕ್ಷಣ ಜಾರಿಗೆ ತರುವಂತೆ ಕೇಳಿದ್ದು, ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಪ್ರಾರಂಭಿಸುವಂತೆ ಒತ್ತಾಯಿಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews