ಬೆಂಗಳೂರು : ಈ ವರ್ಷದ SSLC ಫಲಿತಾಂಶ ಶೇ.62.34 ಮಾತ್ರವೇ – ಫಲಿತಾಂಶದಲ್ಲಿ ಕುಸಿತ ಕಂಡಿರುವುದರಿಂದ ರಾಜ್ಯದ ಶಿಕ್ಷಣ ವ್ಯವಸ್ಥೆಯ ಮೇಲೆ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಲು ಯಾರಿಗೂ ಅವಕಾಶ ಇಲ್ಲ ಎಂಬ ಸಂದೇಶವನ್ನು ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ನೀಡಿದ್ದಾರೆ.
ರಾಜ್ಯದಲ್ಲಿ SSLC ಫಲಿತಾಂಶ ಶೇ.62.34ರಷ್ಟಾಗಿ ದಾಖಲಾಗಿದ್ದು, ಇದು ಕಳೆದ ವರ್ಷದಿಗಿಂತ ಕಡಿಮೆ. 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗಿದ್ದರೂ, ಕೆಲ ಜಿಲ್ಲೆಗಳ ದುರ್ಫಲಿತಾಂಶದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗಂಭೀರ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎಂಬ ನೆಪಕ್ಕೆ ಸ್ಥಳವಿಲ್ಲ. ಫಲಿತಾಂಶ ಕಡಿಮೆ ಬಂದಿದ್ದರೆ ಜವಾಬ್ದಾರಿ ಡಿಡಿಪಿಐಗಳದ್ದೇ" ಎಂದಿದ್ದಾರೆ.
ಶೇ.60 ಕ್ಕಿಂತ ಕಡಿಮೆ ಫಲಿತಾಂಶ ನೀಡಿದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ. “ನೋಟಿಸ್ಗೆ ಸಮರ್ಪಕ ಉತ್ತರವಿಲ್ಲದೆ ಬಿದ್ದರೆ, ಡಿಡಿಪಿಐಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಸಿದ್ದಾರೆ. ಡಿಸಿ, ಸಿಇಒ, ಬಿಇಒಗಳಿಗೆ ಸಭೆಯಲ್ಲಿ ಅವರು ತೀವ್ರ ಸೂಚನೆ ನೀಡಿದ್ದು, "ಆಸಕ್ತಿಯಿಂದ ಕೆಲಸ ಮಾಡಿದರೆ ಫಲಿತಾಂಶವೂ ಉತ್ತಮವಾಗುತ್ತದೆ" ಎಂದು ಹೇಳಿದ್ದಾರೆ. ದಕ್ಷಿಣ ಕನ್ನಡ ಮತ್ತು ಇತರ ಕೆಲವು ಜಿಲ್ಲೆಗಳು ಉತ್ತಮ ಪ್ರದರ್ಶನ ನೀಡಿದ್ದು, ಉಳಿದ ಜಿಲ್ಲೆಗಳ ಅಧಿಕಾರಿಗಳು ಇದರಿಂದ ಪಾಠ ಕಲಿಯಬೇಕು ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.