ಮಧುಗಿರಿ : ಗಡಿಭಾಗದ ಜನರಿಗೆ ಆರೋಗ್ಯ ಭಾಗ್ಯವಿಲ್ಲ | ಜಪಾನಂದಾ ಸ್ವಾಮೀಜಿ ಬೇಸರ

ಮಧುಗಿರಿ : ಗಡಿಭಾಗದ ಜನತೆಗೆ ಅನುಕೂಲವಾಗಲೆಂದು ನಮ್ಮ ಆಶ್ರಮದ ವತಿಯಿಂದ ಮೇ 31 ರಂದು ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗುತ್ತಿದೆ ಎಂದು ಪಾವಗಡ ರಾಮಕೃಷ್ಣ ಆಶ್ರಮದ ಆಧ್ಯಕ್ಷ ಸ್ವಾಮಿ ಜಪಾನಂದ ಮಹಾರಾಜ ಮಧುಗಿರಿಯಲ್ಲಿ ತಿಳಿಸಿದರು.

ತಾಲೂಕಿನ ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಶಾರದಾ ದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋದನಾ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಇನ್ಫೋಸಿಸ್‌ ಫೌಂಡೇಶನ್ ಸಹಯೋಗದಲ್ಲಿ ಮೇ 31ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರ ವರೆಗೆ ಶಿಬಿರ ನಡೆಲಿದೆ. ಶಿಬಿರದಲ್ಲಿ ನುರಿತ ವೆದ್ಯರು ಕಣ್ಣಿನ ತಪಾಸಣೆ ನಡೆಸಿ ಉಪಚಾರ ನೀಡಲಿದ್ದಾರೆ ಎಂದರು.

ಈ ಗಡಿ ಭಾಗದ ಜನರಿಗೆ ಸಿಗಬೇಕಾದ ಆರೋಗ್ಯ ಸೌಲಭ್ಯ ಸಿಗುತ್ತಿಲ್ಲ. ನೂತನ ಆಸ್ಪತ್ರೆ ನಿರ್ಮಾಣ ಮಾಡಿ ಎಂದು ನಾನು ಹೇಳುತ್ತಿಲ್ಲ. ಇರುವ ಆರೋಗ್ಯ ಕೇಂದ್ರಗಳನ್ನು ಸರಕಾರ ಉನ್ನತೀಕರಣ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಗಡಿಭಾಗದ ಜನತೆಗೆ ಅನುಕೂಲವಾಗಲೆಂದು ನಮ್ಮ ಆಶ್ರಮದ ವತಿಯಿಂದ ಮೇ 31 ರಂದು ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗುತ್ತಿದೆ ಎಂದು ಪಾವಗಡ ರಾಮಕೃಷ್ಣ ಆಶ್ರಮದ ಆಧ್ಯಕ್ಷ ಸ್ವಾಮಿ ಜಪಾನಂದ ಮಹಾರಾಜ ಮಧುಗಿರಿಯಲ್ಲಿ ತಿಳಿಸಿದರು.

ತಾಲೂಕಿನ ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಶಾರದಾ ದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋದನಾ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಇನ್ಫೋಸಿಸ್‌ ಫೌಂಡೇಶನ್ ಸಹಯೋಗದಲ್ಲಿ ಮೇ 31ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರ ವರೆಗೆ ಶಿಬಿರ ನಡೆಲಿದೆ. ಶಿಬಿರದಲ್ಲಿ ನುರಿತ ವೆದ್ಯರು ಕಣ್ಣಿನ ತಪಾಸಣೆ ನಡೆಸಿ ಉಪಚಾರ ನೀಡಲಿದ್ದಾರೆ ಎಂದರು.

ಈ ಗಡಿ ಭಾಗದ ಜನರಿಗೆ ಸಿಗಬೇಕಾದ ಆರೋಗ್ಯ ಸೌಲಭ್ಯ ಸಿಗುತ್ತಿಲ್ಲ. ನೂತನ ಆಸ್ಪತ್ರೆ ನಿರ್ಮಾಣ ಮಾಡಿ ಎಂದು ನಾನು ಹೇಳುತ್ತಿಲ್ಲ. ಇರುವ ಆರೋಗ್ಯ ಕೇಂದ್ರಗಳನ್ನು ಸರಕಾರ ಉನ್ನತೀಕರಣ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

Author:

...
Keerthana J

Copy Editor

prajashakthi tv

share
No Reviews