ಬೀದರ್ : ಆಪರೇಷನ್ ಸಿಂಧೂರ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ದೇಶದಾದ್ಯಂತ ತಿರಂಗಾ ಯಾತ್ರೆ ನಡೆಸಲಾಗುತ್ತಿದ್ದು, ಬೀದರ್ನಲ್ಲೂ ಅದೇ ಆದ್ಮಭಾವದೊಂದಿಗೆ ತಿರಂಗಾ ಯಾತ್ರೆ ನಡೆಯಿತು. ಈ ಯಾತ್ರೆಯಲ್ಲಿ ಔರಾದ್ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೀದರ್ ನಗರದ ಐಬಿಯಿಂದ ಎಪಿಎಮ್ಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯಲ್ಲಿ, ಪ್ರಭು ಚೌಹಾಣ್ ತಿರಂಗ ಧ್ವಜ ಹಿಡಿದು ಹೆಜ್ಜೆ ಹಾಕುತ್ತಿದ್ದರು. ಆದರೆ ಮಧ್ಯಂತರದಲ್ಲಿ ಕುಳಿತಲ್ಲಿಯೇ ಅವರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿತು. ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ತಕ್ಷಣವೇ ಆಘಾತದಿಂದ ಕ್ರಿಯಾಶೀಲವಾಗಿ ವರ್ತಿಸಿ, ಶಾಸಕರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ ಸಾಗಿಸಿದರು.
ಈ ಯಾತ್ರೆಯಲ್ಲಿ ಬೀದರ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ್ ಪಾಟೀಲ್, ವಿವಿಧ ಬಿಜೆಪಿ ಮುಖಂಡರು, ಸ್ವಾಮೀಜಿಗಳು ಹಾಗೂ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಾಸಕರ ಆರೋಗ್ಯ ಸ್ಥಿತಿ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.