Putturu : ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ಶವವಾಗಿ ಪತ್ತೆ

PUTTURU : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ ಕೆಲದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ನೇತ್ರಾವತಿ ನದಿಯ ಪಾಣಿ ಮಂಗಳೂರು ಸೇತುವೆ ಬಳಿ ಇರುವ ನೀರಿನ ಟ್ಯಾಂಕಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಮನೆಯಿಂದ ನಾಪತ್ತೆಯಾಗಿದ್ದ ರಮೇಶ್ ರೈ ಅವರ ಮೊಬೈಲ್ ಫೋನ್ ಹಾಗೂ ಬೈಕ್ ಪಾಣಿ ಮಂಗಳೂರು ಸೇತುವೆಯ ಬಳಿ ಪತ್ತೆಯಾಗಿತ್ತು. ಈ ವಿಚಾರ ಬೆಳಕಿಗೆ ಬಂದ ಬಳಿಕ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಮತ್ತು ಸ್ಥಳೀಯರು ಇಡೀ ಪ್ರದೇಶದಲ್ಲಿ ಹುಡುಕಾಟ ಆರಂಭಿಸಿದ್ದರು. ಆದರೆ ಇಂದು ಮಂಗಳೂರಿನ ಪಾಣಿ ಮಂಗಳೂರು ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಸಾವು ಆಕಸ್ಮಿಕವೋ? ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂದು ಪೊಲೀಸರಲ್ಲಿ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. ಪೊಲೀಸರ ತನಿಖೆಯಿಂದಷ್ಟೇ ಸಾವಿನ ಸತ್ಯಾಸತ್ಯತೆ ತಿಳಿಯಬೇಕಿದೆ.

ಸದ್ಯ ಈ ಸಂಬಂಧ ಪುತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews