RAICHURU: ಕನ್ನಡದ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ಗೋಲ್ಡ್ ಸುರೇಶ್ ವಿರುದ್ಧ ಈಗ ಗಂಭೀರ ವಂಚನೆ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ನಿವಾಸಿ ಮೈನುದ್ದಿನ್ ಎಂಬುವವರು, ಲಕ್ಷ ಲಕ್ಷ ರೂಪಾಯಿ ಹಣ ವಂಚನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
ಮೈನುದ್ದಿನ್ ಎಂಬುವರಿಗೆ ಗೋಲ್ಡ್ ಸುರೇಶ್ ಕೇಬಲ್ ಚಾನೆಲ್ ಸೆಟ್ಅಪ್ ಮಾಡಿಕೊಡುವುದಾಗಿ ಭರವಸೆ ನೀಡಿ, ಬರೋಬ್ಬರಿ 14 ಲಕ್ಷಕ್ಕೆ ಒಪ್ಪಂದ ಆಗಿ ಸುರೇಶ್ 4 ಲಕ್ಷ ರೂಪಾಯಿ ಮುಂಗಡ ಹಣ ಪಡೆದಿದ್ದರು, ಬಳಿಕ ಹಂತ ಹಂತವಾಗಿ 7 ಲಕ್ಷ ರೂಪಾಯಿ ಪಡೆದುಕೊಂಡಿದ್ದರು. 2017ರಲ್ಲಿ ಇಬ್ಬರ ಮಧ್ಯೆ ಒಪ್ಪಂದ ಸಹ ಅಗಿತ್ತು, 2017ರಲ್ಲಿ ಇಬ್ಬರ ಮಧ್ಯೆ ಒಪ್ಪಂದ ನಡೆದಿತ್ತು. ಆದರೆ, ಆ ಬಳಿಕ ಅರೆಬರೆ ಕೆಲಸ ಮಾಡಿ ಸುರೇಶ್ ಅರ್ಧಕ್ಕೆ ಬಿಟ್ಟರು. ಇದಾದ ಬಳಿಕ 2017ರಲ್ಲೇ 1 ಲಕ್ಷ ರೂ. ಹಣ ವಾಪಸ್ ಪಡೆಯಲಾಗಿತ್ತು. ಆ ನಂತರ ಸುರೇಶ್ ನನ್ನ ಮತ್ತು ಸ್ನೇಹಿತನ ಸಂಪರ್ಕಕ್ಕೇ ಸಿಕ್ಕಿರಲಿಲ್ಲ ಎಂದು ಮೈನುದ್ದೀನ್ ಆರೋಪಿಸಿದ್ದಾರೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ಮೈನುದ್ದಿನ್ ದೂರು ನೀಡಿದ್ದಾರೆ. ಈ ಮಧ್ಯೆ, ಬಿಗ್ಬಾಸ್ ಮೂಲಕ ಜನಪ್ರಿಯರಾದ ಗೋಲ್ಡ್ ಸುರೇಶ್ ವಿರುದ್ಧ ಈ ರೀತಿಯ ಆರೋಪ ಕೇಳಿಬಂದಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.