ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ | ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಮಟ್ಟ ಕುಸಿತ

ಮಂಡ್ಯ : ರಾಜ್ಯದ ಹಲವೆಡೆ ಮಳೆ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದರೂ, ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಮಳೆಯಿಲ್ಲದಾಗಿದ್ದು, ಕಾವೇರಿ ನದಿಗೆ ಜೀವಾಳವಾಗಿರುವ ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.

ಪ್ರಸ್ತುತ ಕೆಆರ್‌ಎಸ್ ಡ್ಯಾಂನಲ್ಲಿ ಕೇವಲ 15 ಟಿಎಂಸಿ ನೀರು ಉಳಿದಿದ್ದು, ಇದರಲ್ಲಿ 7 ಟಿಎಂಸಿ ನೀರು ಡೆಡ್‌ಸ್ಟೋರೇಜ್  ಆಗಿರುವುದರಿಂದ ಉಪಯೋಗಕ್ಕೆ ಲಭ್ಯವಿರುವ ನೀರು ಕೇವಲ 8 ಟಿಎಂಸಿ ಮಾತ್ರ. ಇದರಿಂದ ರೈತರಿಗೆ ಬೇಕಾದ ನೀರಿನ ಕೊರತೆ ಉಂಟಾಗುವ ಭೀತಿ ಎದುರಾಗಿದ್ದು, ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ಕುಡಿಯುವ ನೀರು ಪೂರೈಸಬೇಕಾದ ಭಾರೀ ಹೊಣೆ ರಾಜ್ಯದ ಮುಂದೆ ನಿಂತಿದೆ.

ಮಳೆಯ ಅಬ್ಬರ ರಾಜ್ಯದ ಇತರ ಭಾಗಗಳಲ್ಲಿ ಕಂಡುಬರುತ್ತಿದ್ದರೂ, ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ಕಾಣಿಸದಿರುವುದು ತೀವ್ರ ಚಿಂತೆ ಮೂಡಿಸುತ್ತಿದೆ. ಮುಂದಿನ ತಿಂಗಳು ಮುಂಗಾರು ಮಳೆಯು ತಡವಾದರೆ, ಕುಡಿಯುವ ನೀರಿನ ತೀವ್ರ ಹಾಹಾಕಾರ ಉಂಟಾಗಬಹುದು ಎಂಬ ಆತಂಕವನ್ನು ಪರಿಸರ ತಜ್ಞರು ವ್ಯಕ್ತಪಡಿಸಿದ್ದಾರೆ. ಇಂದು ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿ ಆಗಿದ್ದರೆ, ಪ್ರಸ್ತುತ ನೀರಿನ ಮಟ್ಟ ಕೇವಲ 89.15 ಅಡಿಗೇ ಇಳಿದಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಸ್ಪಷ್ಟಪಡಿಸುತ್ತದೆ.

ತಕ್ಷಣವೇ ಸರ್ಕಾರ ಹವಾಮಾನ ಇಲಾಖೆ ಜೊತೆ ಸಮಾಲೋಚನೆ ನಡೆಸಿ, ಜಲಾನಯನ ಪ್ರದೇಶಗಳಲ್ಲಿ ಮಳೆಯ ಪಾತಳಿಕೆಯ ಕುರಿತು ಸ್ಪಷ್ಟ ಚಿತ್ರಣ ಹೊಂದಬೇಕು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಮುಂಗಾರು ವಿಳಂಬವಾದರೆ, ಕೃಷಿ ಹಾಗೂ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರಗೊಳ್ಳಬಹುದೆಂದು ಆತಂಕ ಎದುರಾಗಿದೆ.

 

 

Author:

...
Sushmitha N

Copy Editor

prajashakthi tv

share
No Reviews