KARNATAKA RAIN : ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಅವಧಿಗಿಂತ ಮೊದಲೇ ಪ್ರವೇಶಿಸಿದ್ದು, ರಾಜ್ಯಾದ್ಯಂತ ಮಳೆ ಆರ್ಭಟಿಸುತ್ತಿದೆ. ಕಳೆದ ವಾರದಿಂದ ಕೊಂಚ ವಿಶ್ರಾಂತಿ ನೀಡಿದ್ದ ವರುಣ, ಮತ್ತೆ ಚುರುಕಾಗಲಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಗಾಲದ ತೀವ್ರತೆಯು ಮತ್ತೆ ಹೆಚ್ಚಾಗಲಿದ್ದು, ಜೂನ್ 9, 10 ಮತ್ತು 11 – ಈ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆಯ ಆರ್ಭಟ ಮುಂದುವರಿಯಲಿದೆ. ಹವಾಮಾನ ಇಲಾಖೆಯ ಪ್ರಕಾರ, ಈ ಬಾರಿ ಮುಂಗಾರು ಕಾಲಾವಧಿಗೂ ಮುನ್ನವೇ ರಾಜ್ಯ ಪ್ರವೇಶಿಸಿದ್ದು, ಇದರಿಂದಾಗಿ ರೈತರ ಮೊಗದಲ್ಲಿ ನಗು ಮೂಡಿದೆ.
ರಾಜ್ಯದ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
* 115 ಮಿಮೀ ವರೆಗೆ ಮಳೆಯಾಗುವ ಸಾಧ್ಯತೆ: ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಉಡುಪಿ, ಹಾಸನ, ದಕ್ಷಿಣ ಕನ್ನಡ, ಕೊಡಗು
* ಸಾಧಾರಣ ಮಳೆ: ಬೆಂಗಳೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಕೋಲಾರ, ತುಮಕೂರು, ರಾಮನಗರ
ಈ ಮಳೆಯ ಅಬ್ಬರದಿಂದಾಗಿ ರೈತರು ಬಿತ್ತನೆ ಕಾರ್ಯಗಳಲ್ಲಿ ತೊಡಗಿರುವರು. ಮಳೆಯ ಸಕಾರಾತ್ಮಕ ಪರಿಣಾಮಗಳೊಂದಿಗೆ, ಇನ್ನು ಕೆಲವಡೆಗಳಲ್ಲಿ ಹೆಚ್ಚಿನ ಮಳೆಯಿಂದ ಸಮಸ್ಯೆ ಉಂಟಾಗುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವುದು ಅಗತ್ಯ.