RAMANAGARA : ಕರಾವಳಿ ಭಾಗದಲ್ಲಿ ಹೆಚ್ಚಾಗಿ ನಡೆಯುತ್ತಿದ್ದ ನೈತಿಕ ಪೊಲೀಸ್ ಗಿರಿ ಇದೀಗ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರೋ ನಗರದಲ್ಲಿ ಬೆಳಕಿಗೆ ಬಂದಿದೆ. ಹೌದು ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿರೋ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಯುವಕ, ಮುಸ್ಲಿಂ ಯುವತಿ ಬೈಕ್ನಲ್ಲಿ ಹೋಗ್ತಿದ್ದ ವೇಳೆ ಕೆಲ ಮುಸ್ಲಿಂ ಯುವಕರು ಬೈಕ್ನನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ.
ರಾಮನಗರ ಹೊರವಲಯದ ಬೆಂಗಳೂರು- ಮೈಸೂರು ಹಳೇ ಹೆದ್ದಾರಿಯಲ್ಲಿ ಬೈಕ್ನಲ್ಲಿ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಹೋಗ್ತಾ ಇದ್ದರು. ಈ ವೇಳೆ ಮತ್ತೊಂದು ಬೈಕ್ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು ಬೈಕ್ನನ್ನು ಅಡ್ಡಗಟ್ಟಿ, ನೀವು ಯಾರು..? ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಮುಸ್ಲಿಂ ಯುವತಿಯನ್ನು ಯಾಕೆ ಬೈಕ್ನಲ್ಲಿ ಕರೆದುಕೊಂಡು ಹೋಗ್ತಾ ಇದ್ದೀಯಾ ಎಂದು ಹಿಂದೂ ಯುವಕನಿಗೆ ಅವಾಜ್ ಹಾಕಿ ಬೆದರಿಸಿದ್ದಾರೆ.
ಇನ್ನು ನೈತಿಕ ಪೊಲೀಸ್ ಗಿರಿ ನಡೆಸಿರೋ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ನೈತಿಕ ಪೊಲೀಸ್ ಗಿರಿ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.