RCB VICTORY PARADE : ಆರ್ಸಿಬಿಯ (RCB) ಬೆಂಗಳೂರಿನ ಅಭಿಮಾನಿಗಳಿಗೆ ಸಿಹಿ ಸುದ್ದಿ. 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ (Bengaluru) ಆರ್ಸಿಬಿಯ ವಿಕ್ಟರಿ ಪರೇಡ್ (RCB Victory Parade) ನಡೆಯಲಿದೆ. ಇಂದು ಸಂಜೆ ಬೆಂಗಳೂರಿನಲ್ಲಿ ಆರ್ಸಿಬಿಯ ವಿಕ್ಟರಿ ಪರೇಡ್ ನಡೆಯಲಿದೆ. RCB ಅಧಿಕೃತವಾಗಿ ಈ ವಿಷಯವನ್ನು ಪ್ರಕಟಿಸಿದೆ. ಮೆರವಣಿಗೆ ಇಂದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ಪ್ರಾರಂಭವಾಗಲಿದೆ ಮತ್ತು ಪ್ರಸಿದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ [CHINNASWAMY STADIUM] ಕೊನೆಯಾಗಲಿದೆ.
ಆರ್ಸಿಬಿಯ ಈ ಐತಿಹಾಸಿಕ ಗೆಲುವಿನ ಬಳಿಕ, ಅಭಿಮಾನಿಗಳು ಪುಟಿದೇಳುತ್ತಿದ್ದಾರೆ. ವಿರಾಟ್ ಕೊಹ್ಲಿಯ [VIRAT KHOLI] ನಾಯಕತ್ವದಲ್ಲಿ ತಂಡ ತೋರಿಸಿರುವ ಸಾಧನೆಗೆ ಇದು ನಿಜಕ್ಕೂ ಅದ್ಧೂರಿ ಸಂಭ್ರಮ.
ಅಹಮದಾಬಾದ್ನಿಂದ ವಿಶೇಷ ವಿಮಾನದಲ್ಲಿ ಆರ್ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್ಎಎಲ್ [HAL] ವಿಮಾನ ನಿಲ್ದಾಣ ತಲುಪಲಿದ್ದಾರೆ.ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರ್ಸಿಬಿ ತಂಡ Taj Westend Hotel ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ TROPHY ನೀಡಲಿದೆ.
CM ಭೇಟಿ ಬಳಿಕ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ OPEN TOP BUS ಮೂಲಕ RCB ತಂಡದ PARADE ನಡೆಯಲಿದೆ. ಸುಮಾರು 1 ಕಿ.ಮೀ ವಿಜಯಯಾತ್ರೆ ನಡೆಸಲು ಸಿದ್ಧತೆ ನಡೆದಿದೆ. ಸಾರ್ವಜನಿಕ ಮೆರವಣಿಗೆ ಬಳಿಕ 6 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಪಾಲ್ಗೊಳ್ಳ ಲಿದ್ದಾರೆ. ಇನ್ನು ನಗರದಾದ್ಯಂತ ಪೊಲೀಸ್ ಭದ್ರತೆ ಜೋರಾಗಿದ್ದು, TRAFIC ನಿಯಂತ್ರಣಕ್ಕೆ ನಿರ್ದಿಷ್ಟ ಮಾರ್ಗಗಳನ್ನು ಕೂಡ ಗುರುತಿ ಸಲಾಗಿದೆ.