Chikkaballapura : ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಿಸಿದ ಸಂದೀಪ್ ರೆಡ್ಡಿ

CHIKKABALLAPURA : ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮನೆಮಾತಾಗಿರುವ ಸಮಾಜ ಸೇವಕ ಹಾಗೂ ಬಿಜೆಪಿ ರಾಜ್ಯ ಮುಖಂಡ ಸಂದೀಪ್ ಬಿ ರೆಡ್ಡಿ ಅವರು ಸದಾ ಸಮಾಜಮುಖಿ ಕೆಲಸದಲ್ಲಿ ಗುರುತಿಸಿಕೊಂಡಿದ್ದಾರೆ. ಇಂದು ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸಂದೀಪ್ ಬಿ ರೆಡ್ಡಿ ಸ್ಪಂದನ ವಿದ್ಯಾರ್ಥಿ ವೇತನ ನಿಮ್ಮ ಪರಿಶ್ರಮಕ್ಕೆ ನಮ್ಮ ಸ್ಪಂದನೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಇಡೀ ರಾಜ್ಯದ ಗಮನವನ್ನು ಸೆಳೆದಿದ್ದಾರೆ.

ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ಅದರಲ್ಲೂ 90% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ  10 ಸಾವಿರ ಹಾಗೂ ಉಳಿದ ವಿದ್ಯಾರ್ಥಿಗಳಿಗೆ 5 ಸಾವಿರ ಹಣವನ್ನು ನೀಡಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಿಸಿ ಮಕ್ಕಳ ಮುಂದಿನ ಭವಿಷ್ಯಕ್ಕೂ ನೆರವಾಗುವುದಾಗಿ ಭರವಸೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ ರೆಡ್ಡಿ, ತನಗೆ ಕ್ಯಾನ್ಸರ್ ಬಂದಿದೆ ಎಂದು ವೈದ್ಯರು ತಿಳಿಸಿದ್ದು ಸಾಕಷ್ಟು ಭಯಭೀತನಾಗಿದ್ದರು, ಏನೇ ಆದರೂ ಈ ಕಾರ್ಯಕ್ರಮ ನಡೆಯಬೇಕು ಎಂದು ಆಲೋಚನೆ ಮಾಡಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿ ಭಾವುಕರಾದರು.

ಒಟ್ಟಾರೇ ಅಧಿಕಾರದಲ್ಲಿ ಇದ್ರು ಇಲ್ಲದೇ ಇದ್ದರೂ ತಾನಾಯ್ತು ತನ್ನ ಸಮಾಜ ಸೇವೆಯಾಯ್ತು ಎಂದು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸಂದೀಪ್‌ ರೆಡ್ಡಿ ಸ್ಪಂದಿಸುತ್ತಿರೋದು ಚಿಕ್ಕಬಳ್ಳಾಪುರ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.  

Author:

...
Sushmitha N

Copy Editor

prajashakthi tv

share
No Reviews