ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ: 2025-2026ನೇ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ದಿನಗಣನೆ ಶುರುವಾಗಿದೆ, ಶಾಲಾ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಸಕಲ ತಯಾರಿ ನಡೆಸಲಾಗ್ತಿದೆ. ಈ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿಯ ತೀನಂಶ್ರೀ ಭವನದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಭೆ ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ಶಾಸಕ ಸುರೇಶ್‌ ಬಾಬು ಅಧ್ಯಕ್ಷತೆಯನ್ನು ವಹಿಸಿದ್ರು.

ಸಭೆಯಲ್ಲಿ ಮುಂಬರುವ ಶೈಕ್ಷಣಿಕ ಕಾರ್ಯಕ್ರಮಗಳ ರೂಪುರೇಷೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯತಂತ್ರಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಯ್ತು.  ಮಕ್ಕಳ ಅಭಿವೃದ್ದಿಯಲ್ಲಿ ಪೋಷಕರ ಪಾತ್ರ, ಶಿಕ್ಷಕರ ಜವಾಬ್ದಾರಿ ಹಾಗೂ ಸರ್ಕಾರದ ಮಹತ್ವದ ಕುರಿತಾಗಿ ಚರ್ಚಿಸಲಾಯಿತು.

ಇನ್ನು ಸಭೆಯಲ್ಲಿ ಬಿಇಒ ಕಾಂತರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಶಿವಮೂರ್ತಿ ಸೇರಿದಂತೆ ಹಲವಾರು ಶಿಕ್ಷಣತಜ್ಞರು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Author:

...
Keerthana J

Copy Editor

prajashakthi tv

share
No Reviews