CHIKKABALLAPURA NEWS : ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರ ಗೌಡ ನೇಮಕವಾಗಿದ್ದು, ಅವರು ಸಂಸದ ಡಾ ಕೆ ಸುಧಾಕರ್ ಅವರೊಡನೆ ಇಂದು ಬೆಳಿಗ್ಗೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಂದಿ ಗ್ರಾಮದ ಭೋಗನಂದೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದೇವರು ಆಶೀರ್ವಾದ ಪಡೆದರು.
ನಗರ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಬಿಜೆಪಿ ನೂತನ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಪಕ್ಷ ಸಾಮಾನ್ಯ ಕಾರ್ಯಕರ್ತನಿಗು ಅವಕಾಶ ಕಲ್ಪಿಸುತ್ತೆ. ಕಳೆದ 11 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರಧಾನಿ ಅವರ ಆಡಳಿತದಿಂದ ಪಕ್ಷದ ಘನತೆ ಇನ್ನೂ ಹೆಚ್ಚಿದೆ. ಪಕ್ಷದ ಸಿದ್ಧಾಂತಗಳನ್ನೂಪ್ಪಿ ಪಕ್ಷಕ್ಕೆ ಬಂದೆ ಸದಸ್ಯತ್ವ ಅಭಿಯಾನದಲ್ಲಿ ಕೇವಲ ಮೂರು ತಿಂಗಳ ಅವಧಿಯಲ್ಲಿ ಶಿಡ್ಲಘಟ್ಟ ಕ್ಷೇತ್ರದಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೊಂದಣಿ ಮಾಡಿಸಿದ್ದೇನೆ ಎಂದರು
ಇನ್ನೂ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಂದೀಪ್ ರೆಡ್ಡಿ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಂದೀಪ್ ಅವರು ನನಗೆ ಅಭಿನಂದನೆ ಸಲ್ಲಿಸಿ ಪಕ್ಷಕ್ಕಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದು, ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದರು.
ಈ ವೇಳೆ ರಾಜ್ಯಧ್ಯಕ್ಷರಾದ ವಿಜಯೇಂದ್ರ, ಸಂಸದರಾದ ಡಾ.ಕೆ.ಸುಧಾಕರ್ ಹಾಗು ಜಿಲ್ಲೆಯ ಎಲ್ಲ ಮುಖಂಡರಿಗೆ ಕೃತಘ್ನತೆ ಸಲ್ಲಿಸಿದರು. ಇದೇ ವೇಳೆ ಸಂಸದರಾದ ಡಾ.ಕೆ.ಸುಧಾಕರ್ ನೂತನ ಅಧ್ಯಕ್ಷರಿಗೆ ಅಭಿನಂದನೆ ತಿಳಿಸಿ ಜಿಲ್ಲೆಯಲ್ಲಿ ಬಿಜೆಪಿ ಬಲಪಡಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಕೆ ವಿ ನಾಗರಾಜ್,ಬಿಎಂಟಿಸಿ ಮಾಜಿ ಉಪಾಧ್ಯಕ್ಷ ನವೀನ್ ಕಿರಣ್ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.