ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ಬೇಟೆಗೆ ತೆರಳಿದ್ದ ಯುವಕನೊಬ್ಬ ಬಂದೂಕು ಮಿಸ್ ಫೈರ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತೀರ್ಥಹಳ್ಳಿಯ ಕೊಳಾವರ ಗ್ರಾಮದ ನಿವಾಸಿ ಗೌತಮ್ (25) ಮೃತ ದುರ್ದೈವಿಯಾಗಿದ್ದಾನೆ.
ಮೃತ ಯುವಕನು ಸ್ನೇಹಿತರೊಂದಿಗೆ ಬೇಟೆಗೆ ತೆರಳಿದ್ದ ವೇಳೆ ಪ್ರಾಣಿಗೆ ಗುರಿ ಇಡಲು ಯತ್ನಿಸುತ್ತಿದ್ದಾಗ ಬಂದೂಕು ಆಕಸ್ಮಿಕವಾಗಿ ಮಿಸ್ ಫೈರ್ ಆಗಿದ್ದು, ಅದೇ ಗುಂಡಿಗೆ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.