Sira : ಮಂಜುಶ್ರೀ ಶಾಲೆಯಲ್ಲಿ ಮಕ್ಕಳ ನಡಿಗೆ ಹಸಿರಿನ ಕಡೆಗೆ ಕಾರ್ಯಕ್ರಮ

SIRA : ಶಿರಾ ತಾಲೂಕಿನಲ್ಲಿ ಮಂಜುಶ್ರೀ ಶಿಕ್ಷಣ ಸಂಸ್ಥೆಯ ವತಿಯಿಂದ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ  ‘ಮಕ್ಕಳ ನಡಿಗೆ ಹಸಿರಿನ ಕಡೆಗೆ’ ಎಂಬ ವಿಶೇಷ ಕಾರ್ಯಾಗಾರ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಜುಶ್ರೀ ಶಾಲೆಯ ಸಂಸ್ಥಾಪಕ ಮಹಲಿಂಗಪ್ಪ ಪರಿಸರದ ಜೊತೆಗೆ ಇದ್ದಾಗ ಮಾತ್ರ ಮನುಷ್ಯತ್ವಕ್ಕೆ ಮೌಲ್ಯ ಸಿಗುತ್ತದೆ. ಆದರೆ ಇಂದಿನ ದಿನಗಳಲ್ಲಿ ನಾವು ಪರಿಸರದಿಂದ ದೂರ ಸರಿಯುತ್ತಿರುವುದು ದುಃಖದ ಸಂಗತಿ ಎಂದು ಅಭಿಪ್ರಾಯಪಟ್ಟರು.

 “ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಪರಿಸರ ಶಿಕ್ಷಣ ಕಡಿಮೆಯಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಪರಿಸರದ ಅರಿವು ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲೇ ಪರಿಸರದ ಮಹತ್ವವನ್ನು ಮಕ್ಕಳಿಗೆ ತಿಳಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪರಿಸರ ಉಳಿದರೆ ನಾವೆಲ್ಲ ಉಳಿಯುತ್ತೇವೆ. ಈ ನಿಜವನ್ನು ಎಲ್ಲರೂ ಮನಗಂಡು, ಪರಿಸರ ಸಂರಕ್ಷಣೆಯಲ್ಲಿ ಪಾಲ್ಗೊಳ್ಳಬೇಕು,” ಎಂದು ಅವರು ತಿಳಿಸಿದರು.

ಇನ್ನು ಕಾರ್ಯಕ್ರಮದ ಅಂಗವಾಗಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟಿ, ಮಕ್ಕಳಿಗೆ ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಉಮೇಶ್, ಆಡಳಿತಾಧಿಕಾರಿ ನರಸಿಂಹಣ್ಣ, ಖಜಾಂಚಿ ದಿವ್ಯಪ್ರದೀಪ್ ಮತ್ತು ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Author:

...
Sushmitha N

Copy Editor

prajashakthi tv

share
No Reviews