Sira : ಯುವ ಅರಣ್ಯ ಪಾಲಕನಿಗೆ ಕರ್ತವ್ಯದಲ್ಲೇ ಹೃದಯಾಘಾತ | ಸ್ಥಳದಲ್ಲೇ ಸಾವು

ನವೀನ್‌ (31) ಮೃತ ಅರಣ್ಯ ಪಾಲಕ
ನವೀನ್‌ (31) ಮೃತ ಅರಣ್ಯ ಪಾಲಕ
ತುಮಕೂರು

SIRA : ಇತ್ತೀಚೆಗೆ ಹೃದಯಾಘಾತ (Heart Attack) ಹೆಚ್ಚಾಗಿ ಸಂಭವಿಸುತ್ತಿದೆ. ಹಿಂದೆಲ್ಲ ತೂಕ ಹೆಚ್ಚಳದಿಂದ, ರಕ್ತದೊತ್ತಡದಿಂದ ಈ ಹೃದಯಾಘಾತ ಸಂಭವಿಸುತ್ತಿತ್ತು. ಆದರೆ ಇತ್ತೀಚೆಗೆ ಚಿಕ್ಕಮಕ್ಕಳಿಗೂ ಹಾರ್ಟ್‌ ಅಟ್ಯಾಕ್‌ ಆಗುತ್ತಿದೆ. ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಇತ್ತೀಚೆಗೆ ಹಾರ್ಟ್‌ ಅಟ್ಯಾಕ್‌ ಸಮಸ್ಯೆಗಳೇ ಯುವಕರನ್ನು ಕಾಡುತ್ತಿದೆ. ಕೆಲದಿನಗಳ ಹಿಂದೆ ಇದೇ ಕಿಲ್ಲರ್ ಹಾರ್ಟ್‌ ಅಟ್ಯಾಕ್‌ನಿಂದಾಗಿ ಹಾಸನ ಮೂಲದ ಮೂವರು ಸಾವನ್ನಪ್ಪಿದ್ದರು. ಇದೀಗ ಹೃದಯಾಘಾತಕ್ಕೆ ಮತ್ತೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಹೌದು ಶಿರಾ ತಾಲೂಕಿನ ಬುಕ್ಕಾಪಟ್ಟಣದ ಅರಣ್ಯ ವಲಯದ ದಸೂಡಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಅರಣ್ಯ ಪಾಲಕ ನವೀನ್ (31) ಎಂಬುವರು ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ನವೀನ್, ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಸಿಂಗಟಗೆರೆ ಗ್ರಾಮದ ನಿವಾಸಿ. ಇತ್ತೀಚೆಗಷ್ಟೇ ತುಮಕೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಆದರೆ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತ ನವೀನ್‌ ಗೆ ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳು ಇದ್ದು, ನವೀನ್‌ ಸಾವಿನ ಸುದ್ದಿ ಅವರ ಕುಟುಂಬ ಮತ್ತು ಸಹೋದ್ಯೋಗಿಗಳಿಗೆ ಆಘಾತ ತಂದಿದೆ.

Author:

...
Sushmitha N

Copy Editor

prajashakthi tv

share
No Reviews