ಚಿಕ್ಕಬಳ್ಳಾಪುರ : ಅಡುಗೆ ಮನೆ ನಿರ್ಮಾಣಕ್ಕೆ ಮುಂದಾದ ಸಮಾಜ ಸೇವಕ

ಚಿಕ್ಕಬಳ್ಳಾಪುರ : ಯುವ ಮುಖಂಡ ಎಂದರೆ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ಸಮಾಜ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಕೊಂಡಿದ್ದು, ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ, ಹೌದು ಚಿಕ್ಕಬಳ್ಳಾಪುರ ನಗರದ ವಾರ್ಡ್ ನಂ 7 ರ ನಿಮಕಲಕುಂಟೆ ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯ ಆವರಣದಲ್ಲಿ ಬಿಸಿಯೂಟದ ಅಡುಗೆ ಮನೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೇರವೇರಿಸಿದ್ರು. ನಿಮಕಲಕುಂಟೆ ಕಿರಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಅಡುಗೆ ಮನೆಯ ಕೊಠಡಿ ಇಲ್ಲದೆ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಆಗಿತ್ತು. ಇದನ್ನು ಅರಿತ ಸಮಾಜ ಸೇವಕ ಸಂದೀಪ್ ರೆಡ್ಡಿ ಶಾಲೆಯ ಬಳಿ ಅಡುಗೆ ಕೊಠಡಿ ನಿರ್ಮಾಣಕ್ಕೆ ಮುಂದಾಗಿರುವುದು ಎಲ್ಲರ ಗಮನವನ್ನು ಸೆಳೆದಿದ್ದಾರೆ, ಈ ವೇಳೆ  ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ವಾರ್ಡ್‌ ನ ಮುಖಂಡರು ಭಾಗಿಯಾಗಿ ಅಡುಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಶುಭ ಹಾರೈಸಿದ್ರು.

ಶಾಲೆಗೆ ಅಡುಗೆ ಮನೆ ಕೊಠಡಿ ನಿರ್ಮಾಣಕ್ಕೆ ಮುಂದಾದ ಸಮಾಜ ಸೇವಕ ಸಂದೀಪ್ ರೆಡ್ಡಿ ಕಾರ್ಯಕ್ಕೆ ವಾರ್ಡ್‌ನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ರು. ಸಮಾಜ ಸೇವಕ ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿ ಉನ್ನತ ಸ್ಥಾನಕ್ಕೆ ಏರಲೆಂದು ಕೋರಿದ್ದಾರೆ.

ಒಟ್ಟಾರೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಮಾಜ ಸೇವಕ ಎಂದರೆ ಸದಾ ಮುಂದಾಗುವ ಸಂದೀಪ್ ರೆಡ್ಡಿ ಕಾರ್ಯಕ್ರಮಗಳಿಗೆ ಕ್ಷೇತ್ರದಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Author:

...
Keerthana J

Copy Editor

prajashakthi tv

share
No Reviews