ಕೋಲಾರ:
ಮನೆಯಲ್ಲಿ ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಕುಂಬಾರ ಪಾಳ್ಯದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಳದು ನಿಂತಿದ್ದ ಮಗ ಜವಾಬ್ದಾರಿ ಇಲ್ಲದೇ ಸ್ನೇಹಿತರೊಂದಿಗೆ ಸೇರಿಕೊಂಡು ಬೇಕಾಬಿಟ್ಟಿ ಜೀವನ ನಡೆಸುತ್ತಿದ್ದ. ಇದನ್ನು ಪ್ರಶ್ನೆ ಮಾಡಿದ ತಂದೆ ತಾಯಿ ಮಾತಿನಿಂದ ಮಗ ಬೇಸತ್ತು ನೇಣಿಗೆ ಶರಣಾಗಿದ್ದಾನೆ.
ಮುಳಬಾಗಿಲು ಪಟ್ಟಣದ ಕುಂಬಾರಪಾಳ್ಯ ನಿವಾಸಿ ಗಣೇಶ್ (29) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಇನ್ನು ಗಣೇಶ್ ಮದುವೆಯಾಗಿ ಒಂದು ವರ್ಷ ಕಳೆದಿತ್ತು. ಹೆಂಡತಿ ಮಕ್ಕಳನ್ನ ಚನ್ನಾಗಿ ನೋಡಿಕೋ, ಜವಾಬ್ದಾರಿಯಿಂದಿರು ಎಂದಿದ್ದ ತಂದೆ ತಾಯಿ ಮಾತಿಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನು ಘಟನೆ ಸಂಬಂಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಸಾವಿನ ಕುರಿತು ತನಿಖೆ ಕೈಗೊಂಡಿದ್ದಾರೆ.