BANGALORE : ಐಪಿಎಲ್ 2025 ಕಪ್ ಗೆದ್ದ RCB ತಂಡದ ಜಯೋತ್ಸವಕ್ಕೆ ಜನಸಾಗರ ಜಮಾಯಿಸಿ ಸಂತಸದಿಂದ ಕಂಗೊಳಿಸುತ್ತಿದ್ದ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ಮುಳುಗಿದೆ. ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಆಗಮಿಸಿದ ಭಾರೀ ಜನಸಂದಣಿಯಿಂದಾಗಿ ಕಾಲ್ತುಳಿತ ಉಂಟಾಗಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿವಿಧ ಮೂಲಗಳಿಂದ ಬರುವ ವರದಿಗಳಲ್ಲಿ 4 ರಿಂದ 11 ಮಂದಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಇದೆ. ಹಲವರು ಗಾಯಗೊಂಡು ನಗರದ ವಿವಿಧ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
RCB ತಂಡದ ಅಭಿಮಾನಿಗಳಿಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭ ಅಪರೂಪದ ಉತ್ಸಾಹದ ನಡುವೆಯೇ ಬಿರುಗಾಳಿಯಂತೆ ಅಹಿತಕರ ದಿಕ್ಕೆ ಹೊರಳಿತು.ಕಬ್ಬನ್ ಪಾರ್ಕ್, ವಿಧಾನಸೌಧ, ಮೈದಾನದ ಸುತ್ತಮುತ್ತಿನ ಪ್ರದೇಶಗಳಲ್ಲಿ ಸಾವಿರಾರು ಅಭಿಮಾನಿಗಳು ಸೇರುವ ಮೂಲಕ ನಿಯಂತ್ರಣ ಮೀರಿದ ಪರಿಸ್ಥಿತಿ ಉಂಟಾಯಿತು. ಸರಿಯಾದ ಭದ್ರತಾ ವ್ಯವಸ್ಥೆ ಇಲ್ಲದ ಕಾರಣದಿಂದ ಕಾಲ್ತುಳಿತದ ಘಟನೆ ನಡೆದಿದೆ.
ಇನ್ನು ಜಾಗೃತವಾಗಿ ಕ್ರಮ ಕೈಗೊಂಡ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL), ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಕಬ್ಬನ್ ಪಾರ್ಕ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಿಧಾನಸೌಧ ಮೆಟ್ರೋ ನಿಲ್ದಾಣಗಳಲ್ಲಿ ಇಂದು ಸಂಜೆ 4:30 ರಿಂದ ಮುಂದಿನ ಸೂಚನೆ ಬರುವವರೆಗೆ ಮೆಟ್ರೋ ರೈಲು ನಿಲ್ಲಿಸದಿರುವುದಾಗಿ ಪ್ರಕಟಿಸಿದೆ.
ಈ ನಿಲ್ದಾಣಗಳಲ್ಲಿ ಟೋಕನ್ ಹಾಗೂ ಕ್ಯೂಆರ್ ಕೋಡ್ ಟಿಕೆಟ್ ಸೇವೆಗಳನ್ನು ಸಹ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. BMRCL ಪ್ರಕಟಣೆಯಲ್ಲಿ ಸಾರ್ವಜನಿಕರನ್ನು ಸೂಕ್ತ ಪರಿಹಾರ ವ್ಯವಸ್ಥೆಕೊಳ್ಳಲು ಹಾಗೂ ಪರ್ಯಾಯ ನಿಲ್ದಾಣಗಳನ್ನು ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಲ್ಲಾ ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಗಳನ್ನು ಗಮನಿಸಿ ಸುಗಮ ಪ್ರಯಾಣಕ್ಕಾಗಿ ಮೆಟ್ರೋ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ಬಿಎಂಆರ್ಸಿಎಲ್ ಒತ್ತಾಯಿಸುತ್ತದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳುವಂತೆ ಮತ್ತು ತಮ್ಮ ಪ್ರಯಾಣದ ಅಗತ್ಯಗಳಿಗಾಗಿ ಪರ್ಯಾಯ ಮೆಟ್ರೋ ನಿಲ್ದಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.