ತುಮಕೂರು :
ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಕ್ಯಾತ್ಸಂದ್ರ ಬಳಿ ನಡೆದಿದೆ. ವಿದ್ಯಾರ್ಥಿ ಮಿಥುನ್ ಎಂಬಾತ ಮೃತ ದುರ್ದೈವಿಯಾಗಿದ್ದಾನೆ.
ನಗರದ ಹಾಸ್ಟೆಲ್ ನಿಂದ ಕ್ಯಾತ್ಸಂದ್ರದ ಕಡೆ ವಿದ್ಯಾರ್ಥಿ ಬೈಕ್ ನಲ್ಲಿ ತೆರಳುವ ವೇಳೆ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಇನ್ನು ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಕ್ಯಾತ್ಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.