ಸಿನಿಮಾ : ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಜುಲೈ 14ರವರೆಗೆ ತಾತ್ಕಾಲಿಕ ರಿಲೀಫ್

ಸಿನಿಮಾ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜುಲೈ 14ರವರೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಇತ್ತೀಚೆಗೆ ಇವರಿಗೆ ಜಾಮೀನು ನೀಡಿದ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿಯ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠದ ಮುಂದೆ ನಡೆಯಿತು. ವಿಚಾರಣೆ ಆರಂಭವಾದಾಗ ಸರ್ಕಾರಿ ವಕೀಲರು ತಕ್ಷಣ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಆದರೆ, ಸುಪ್ರೀಂ ಕೋರ್ಟ್ ಬೇಸಿಗೆ ರಜೆ ಬಳಿಕ ಮಾತ್ರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಜುಲೈ 14ರಂದು ಸುಪ್ರೀಂ ಕೋರ್ಟ್‌ನ ಬೇಸಿಗೆ ರಜೆ ಅಂತ್ಯವಾಗುತ್ತಿರುವುದರಿಂದ, ಆ ದಿನದವರೆಗೆ ದರ್ಶನ್ ಮತ್ತು ಇತರ ಆರೋಪಿಗಳು ತಾತ್ಕಾಲಿಕವಾಗಿ ರಿಲೀಫ್ ಹೊಂದಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews