Thirthahalli : ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

THIRTHAHALLI: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಹಿರಿಯ ನ್ಯಾಯವಾದಿ ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡರಾದ ಮಧುಕರ ಮಯ್ಯ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಸಿಬಿನಕೆರೆಯ ಬಳಿಯಲ್ಲಿ ನಡೆದಿದೆ.

ಇಂದು ಸಂಜೆ ಸುಮಾರು 4 ಗಂಟೆ ವೇಳೆಗೆ, ಮಯ್ಯ ಅವರು ಕೋರ್ಟ್‌ನಿಂದ ಹೊರಬರುವ ವೇಳೆ ಸಿಬಿನಕೆರೆಯ ಬಳಿಯಲ್ಲಿ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ರಾಡ್‌ಗಳಿಂದ ತಲೆಗೆ ಗಂಭೀರವಾಗಿ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ತೀವ್ರವಾಗಿ ಗಾಯಗೊಂಡ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ.

ತೀರ್ಥಹಳ್ಳಿ ಪೋಲೀಸರು ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು, ಹಲ್ಲೆ ನಡೆಸಿದವರ ಗುರುತು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಸ್ಥಳೀಯ ಮಾಹಿತಿಗಳ ಆಧಾರದಲ್ಲಿ ತನಿಖೆ ಮುಂದುವರೆಸಿದ್ದಾರೆ. ದಾಳಿಯ ಹಿಂದೆ ರಾಜಕೀಯ ಕಾರಣವಿದೆಯೋ ಅಥವಾ ವೈಯಕ್ತಿಕ ದ್ವೇಷವೇ ಎಂಬ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. ಹಲವು ರಾಜಕೀಯ ಮುಖಂಡರು, ಸಮಾಜದ ಪ್ರಮುಖರು ಮಯ್ಯ ಅವರ ಮೇಲಿನ ದಾಳಿಯನ್ನು ಗಂಭೀರವಾಗಿ ಖಂಡಿಸಿದ್ದಾರೆ.

 

Author:

...
Sushmitha N

Copy Editor

prajashakthi tv

share
No Reviews