ಮೈಸೂರು : ಜಮೀನಿನಲ್ಲಿ ಮೇಕೆ ಮೇಯಿಸುವಾಗ ಹುಲಿ ದಾಳಿ | ಯುವಕ ಬಲಿ

ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರದಲ್ಲಿ ಹುಲಿ ದಾಳಿಗೆ ಯುವಕ ಬಲಿಯಾದ ದಾರುಣ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಹರೀಶ್ (28) ಎಂದು ಗುರುತಿಸಲಾಗಿದೆ.

ಮೇಕೆಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದ ಹರೀಶ್ ಮೇಲೆ ಅರಣ್ಯ ಪ್ರದೇಶದಿಂದ ಬಂದ ಹುಲಿ ದಾಳಿ ನಡೆಸಿದ್ದು, ಅವರ ಮೇಲೆ ಗಂಭೀರ ಗಾಯಗಳನ್ನುಂಟುಮಾಡಿದೆ. ಕೂಡಲೇ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಇನ್ನು ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಇನ್ನು ಪ್ರಕರಣ ಸಂಬಂಧ ಪೊಲೀಸ್ ತನಿಖೆ ಆರಂಭವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews