ಕಲಬುರಗಿ : ಬೈಕ್‌ಗೆ ಟಿಪ್ಪರ್‌ ಡಿಕ್ಕಿ | ಯುವಕ ದುರ್ಮರಣ

ಕಲಬುರಗಿ : ಬೈಕ್ ಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಅಪಘಾತದಲ್ಲಿ ಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಕ್ರಾಸ್ ಬಳಿ ನಡೆದಿದೆ.
 

ಹನುಮಂತ (18) ಎಂಬ ಯುವಕನು ಸ್ಥಳದಲ್ಲೇ ಮೃತಪಟ್ಟಿದ್ದು, ಲಕ್ಷ್ಮಣ್ ಹಲಕರ್ಟ್ ಎಂಬ ಮತ್ತೊಬ್ಬ ಯುವಕನು ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಇಬ್ಬರು ಸಂಕನೂರಿನಿಂದ ನಾಲವಾರ ಕಡೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಎದುರಿನಿಂದ ಬಂದ ಟಿಪ್ಪರ್ ಲಾರಿ ಗುದ್ದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಲಕ್ಷ್ಮಣ್ ಅವರನ್ನು ತಕ್ಷಣವೇ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ವಾಡಿ ಠಾಣೆಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews