ತಿಪಟೂರು : ರಾಜ್ಯದಲ್ಲಿ ಜನೌಷಧ ಕೇಂದ್ರ ಕ್ಲೋಸ್ | ತಿಪಟೂರಲ್ಲಿ ಕಪ್ಪುಪಟ್ಟಿ ಧರಿಸಿ ಆಕ್ರೋಶ

ತಿಪಟೂರು : ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷೆ ಯೋಜನೆಯಲ್ಲಿ ಜನೌಷಧ ಕೇಂದ್ರವು ಒಂದು. ಬಡವರಿಗೆ ಅತೀ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ಪೂರೈಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಿತ್ತು. ಆದರೆ ಇಂದು ಸರ್ಕಾರ ರಾಜ್ಯದ ಎಲ್ಲಾ ಜನೌಷಧ ಕೇಂದ್ರಗಳನ್ನು ಮುಚ್ಚುತ್ತಿದೆ ಅಂತ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇತ್ತ ತಿಪಟೂರಿನಲ್ಲಿ ಮಾಜಿ ಸಚಿವ ನಾಗೇಶ್‌ ನೇತೃತ್ವದಲ್ಲಿ ಸರ್ಕಾರದ ನಿರ್ಧಾರವನ್ನು ವಿರೋಧಿ, ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಬಿಜೆಪಿ ಕಾರ್ಯಕರ್ತರು ಜಮಾಯಿಸಿ, ಸಿಎಂ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಸಚಿವ ದಿನೇಶ್‌ ಗುಂಡೂರಾವ್‌ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಇದೇ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ನಾಗೇಶ್‌, ಬಡವರು ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗಲೆಂದೆ ಕೇಂದ್ರ ಸರ್ಕಾರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನ ಔಷಧಿ ಕೇಂದ್ರವನ್ನು ತೆರೆದಿದೆ. ಇಂತಹ ಜನೌಷಧ ಕೇಂದ್ರಗಳಲ್ಲಿ ಶೇಕಡ 20ರಷ್ಟು ರಿಯಾಯಿತಿ ದರದಲ್ಲಿ ಔಷಧಿ ನೀಡುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಕೇಂದ್ರವನ್ನು ಮುಚ್ಚುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

ಇನ್ನು ಬಿಜೆಪಿ ಮುಖಂಡರು ಮಾತನಾಡಿ, ಜನ ಔಷಧಿ ಕೇಂದ್ರವನ್ನು ಮುಚ್ಚಿರುವುದು ಯಾವ ರೀತಿ ಸರಿ. ಇದನ್ನು ಕೂಡಲೇ ತಿರಸ್ಕರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವು ಸಾರ್ವಜನಿಕರು ಹಾಜರಿದ್ದರು.

Author:

...
Sushmitha N

Copy Editor

prajashakthi tv

share
No Reviews