ಬೆಂಗಳೂರು : ಬೆಂಗಳೂರು ನಗರದ ಹೆಬ್ಬಾಳ ಫ್ಲೈಓವರ್ ಮೇಲೆ ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಸದ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ನಡೆದಿದೆ. ಕಸದ ಲಾರಿ ಚಾಲಕ ಫಯಾಜ್ ಅಹಮ್ಮದ್ ಎಂಬಾರ ಮೃತ ದುರ್ದೈವಿಯಾಗಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುತ್ತಿದ್ದಾಗ, ಮಧ್ಯರಾತ್ರಿ ಸುಮಾರಿಗೆ ಈ ಅಪಘಾತ ಸಂಭವಿಸಿದೆ. 10 ಚಕ್ರದ ಓಪನ್ ಬಾಡಿ ಲಾರಿ, ಕಸದ ಲಾರಿ ಮತ್ತು ಎಟಿರ್ಗಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ರಸ್ತೆ ಮೇಲೆಯೇ ಕಲ್ಲು ತುಂಬಿದ್ದ ಲಾರಿ ಪಲ್ಟಿಯಾಗಿದೆ. ಈ ವೇಳೆ ಕಸದ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಅಪಘಾತದ ಸಂಭವಿಸುತ್ತಿದ್ದಂತಯೇ ರಸ್ತೆಯಲ್ಲಿ ಕೆಲ ಗಂಟೆಗಳ ಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ವಿಷಯ ತಿಳಿದು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನಗಳನ್ನು ತೆರವುಗೊಳಿಸಿ ವಾಹನ ಸಂಚರಿಸಲು ಅನುವು ಮಾಡಿಕೊಟ್ಟರು. ಘಟನೆ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.