TUMAKURU : ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸುಂಕಾಪುರದಲ್ಲಿ ನಡೆಯುತ್ತಿರುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟದ ಸ್ಥಳಕ್ಕೇ ಇಂದು ಕೇಂದ್ರ ಸಚಿವ ವಿ. ಸೋಮಣ್ಣ ಸ್ಥಳಕ್ಕೆ ಆಗಮಿಸಿ, ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಿದ್ದು, ಇದೇ ವೇಳೆ ರೈತರ ಧ್ವನಿಗೆ ಬಲ ತುಂಬಿದ್ದಾರೆ.
ಕೆನಾಲ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸೋಮಣ್ಣ ಅವರು ಕಾಮಗಾರಿಯ ಪ್ರಗತಿ ಹಾಗೂ ಸ್ಥಳೀಯರ ಬೇಡಿಕೆಗಳನ್ನು ಆಲಿಸಿದರು. ಅವರ ಜೊತೆಗೆ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಶಂಕರ್ ಹೆಬ್ಬಾಕ, ಮಾಜಿ ಸಂಸದ ಜಿ.ಎಸ್. ಬಸವರಾಜು, ಹಾಗೂ ಸೋಗಡು ಶಿವಣ್ಣ ಸಹ ಉಪಸ್ಥಿತರಿದ್ದರು.
ಇನ್ನು ಸಹಸ್ರಾರು ರೈತರು ಸ್ಥಳದಲ್ಲಿ ಜಮಾವಣೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿಯಾದ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮರದ ಕಟ್ಟಿಗೆಯಿಂದ ಬ್ಯಾರಿಕೇಡ್ ನಿರ್ಮಿಸಲಾಗಿತ್ತು. ಇನ್ನು ಈ ವೇಳೆ ಸಚಿವರು ರೈತರ ಸಮಸ್ಯೆಗಳನ್ನು ಆಲಿಸಿದರು.