Tumakuru : ಬೆಂಗಳೂರಿನ ಕಾಲ್ತುಳಿತ ಘಟನೆ ಖಂಡಿಸಿ ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ

TUMAKURU : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಘಟನೆ ಸಂಬಂಧ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೆ ಈ ದುರಂತವನ್ನು ಖಂಡಿಸಿ ತುಮಕೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿ, ಅಮಾಯಕರ ಬಲಿ ಪಡೆದು, ಪ್ರಾಮಾಣಿಕರನ್ನು ಅಮಾನತು ಮಾಡಿದ ನಾಚಿಕೆಗೇಡು ಸರ್ಕಾರ ಅಂತ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಹಾಗೂ ವೈ.ಹೆಚ್‌. ಹುಚ್ಚಯ್ಯ ನೇತೃತ್ವದಲ್ಲಿ ಟೌನ್‌ಹಾಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಗೃಹ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದ್ದು. ಈ ವೇಳೆ ಬಿಜೆಪಿ ಹಿರಿಯ ಮುಖಂಡ ವೈ.ಹೆಚ್‌.ಹುಚ್ಚಯ್ಯ ಮಾತನಾಡಿ, ಬೆಂಗಳೂರಿನಲ್ಲಿ ನಡೆದಿರುವ ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ನೇರಹೊಣೆ. ನೂರಕ್ಕೆ ನೂರರಷ್ಟು ಗೃಹ ಸಚಿವರೇ ವೈಫಲ್ಯವೇ ದುರಂತಕ್ಕೆ ಕಾರಣ. ವಿಧಾನಸೌಧ ಮತ್ತು ಕ್ರೀಡಾಂಗಣ ಎರಡು ಕಡೆ ಮಾಡಿತ್ತು ದೊಡ್ಡ ತಪ್ಪು. ಆದರೆ ಎರಡು ಕಡೆ ಕಾರ್ಯಕ್ರಮ ಮಾಡುವ ಅಗತ್ಯ ಏನಿತ್ತು. ಒಂದು ಕಡೆ ಮಾಡಿದ್ದರೆ ಸರಿ ಇರೋದು. ಈ ರಾಜ್ಯದ ಗೃಹ ಮಂತ್ರಿಯಾಗಿ ಅರಿವಿದ್ದರೂ ಪರಮೇಶ್ವರ್‌ ಆಸಲ್ಯ ತೋರಿದ್ದಾರೆ. ಈ ಕಾರಣಕ್ಕೆ ಅಲ್ಲಿ ಅಪಘಾತ ಸಂಭವಿಸಿ ಸಾವು-ನೋವುಗಳಾಗಿವೆ ಎಂದು ಸರ್ಕಾರ ವಿರುದ್ಧ ಕಿಡಿಕಾರಿದ್ರು.

ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಮಾತನಾಡಿ, ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಮಾಡೋದು ಸರಿಯಲ್ಲ ಅಂತಾ ಇಂಟಲಿಜೆನ್ಸ್‌ ಹೇಳಿದರೂ ಕೂಡ ತಲೆಕೆಡಿಸಿಕೊಂಡಿಲ್ಲ, ಕಾರ್ಯಕ್ರಮ ಮಾಡಿದ್ದಾರೆ. ಈ ಕಾರಣಕ್ಕೆ ಇಂತಹ ದುರಂತ ನಡೆದಿದೆ. ಆದರೆ ಸಿಎಂ ಮತ್ತು ಡಿಸಿಎಂ ಇಬ್ಬರು ಕೂಡ ತಮ್ಮ ವೈಫಲ್ಯವನ್ನು ಮುಚ್ಚಿಡುವುದಕ್ಕೋಸ್ಕರ ಕಮಿಷನರ್‌ ಮೇಲೆ ಹಾಕಿದ್ದಾರೆ. ಕಮಿಷನರ್‌ ದಯಾನಂದ್‌ ಅವರನ್ನು ಅಮಾನತು ಮಾಡಿರುವುದು ದುರದೃಷ್ಟಕರ. ಮುನ್ಸೂಚನೆ ಇದ್ದರೂ ಕೂಡ ಕ್ಯಾರೆ ಎನ್ನದೆ ಕಾರ್ಯಕ್ರಮ ಮಾಡಿ 11 ಮಂದಿಯ ಸಾವಿಗೆ ಕಾರಣವಾಗಿದೆ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.

ಇನ್ನು ಪ್ರತಿಭಟನೆಯಲ್ಲಿ ನೇರವಾಗಿ ಗೃಹ ಸಚಿವ ಪರಮೇಶ್ವರ್‌ ವಿರುದ್ಧ ಧಿಕ್ಕಾರಗಳನ್ನು ಕೂಗಿ ನಂತರ ಗೃಹಸಚಿವರ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ದುರಂತಕ್ಕೆ ಸರ್ಕಾರವೇ ನೇರ ಹೊಣೆ. ಹೊಣೆಕಾರಿಕೆಯಿಂದ ತಪ್ಪಿಸಿಕೊಳ್ಳಲು ಅಮಾಯಕರನ್ನು ಬಲಿ ಕೊಡ್ತಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

Author:

...
Sushmitha N

Copy Editor

prajashakthi tv

share
No Reviews