TUMAKURU : ತುಮಕೂರಿನ ಹೆಮ್ಮೆಯ ಸಚಿವರಾದ, ಸಹಕಾರ ಕ್ಷೇತ್ರದಲ್ಲಿ ಕಾಂತ್ರಿ ಮಾಡಿರೋ ಸಚಿವ ಕೆ.ಎನ್ ರಾಜಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ತುಮಕೂರಿನಲ್ಲಿ ಅಮೃತ ಮಹೋತ್ಸವ ಬೃಹತ್ ಕಾರ್ಯಕ್ರಮ ನಡೆಸಲಾಗ್ತಿದೆ. ಜೂನ್ 21 ರ ಶನಿವಾರದಂದು ತುಮಕೂರು ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ರಾಜಣ್ಣ ಅಮೃತ ಮಹೋತ್ಸವ ಸಮಾರಂಭದ ಸಿದ್ಧತೆಗಳು ಭರದಿಂದ ಸಾಗಿವೆ. ಕಳೆದ ಏಪ್ರಿಲ್ 13 ರಂದೇ ರಾಜಣ್ಣ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ಮಾಡಲು ನಿರ್ಧಾರ ಮಾಡಲಾಗಿತ್ತು, ಆದರೆ ಪಹಲ್ಗಾಮ್ ದುರಂತವಾಗಿದ್ದರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಇದೀಗ ಶನಿವಾರ ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮ ಮಾಡಲಾಗ್ತಿದ್ದು, ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ರಾಜಣ್ಣ ಅಭಿಮಾನಿಗಳು ಭಾಗಿಯಾಗಲಿದ್ದಾರೆ.
ಇದೇ ಶನಿವಾರ ಬೆಳಗ್ಗೆ 10 ಗಂಟೆಗೆ ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮ ಹಾಗೂ ಅಭಿನಂದನಾ ಗ್ರಂಥ ಲೋಕಾರ್ಪಣೆ ಆಗಲಿದೆ. ಬೃಹತ್ ಕಾರ್ಯಕ್ರಮದ ಅಂಗವಾಗಿ ಜ್ಯೂನಿಯರ್ ಕಾಲೇಜು ಮೈದಾನಕ್ಕೆ ಎಂಎಲ್ಸಿ ರಾಜೇಂದ್ರ ರಾಜಣ್ಣ ಭೇಟಿ ನೀಡಿ, ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು. ಬಳಿಕ ಬೃಹತ್ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಗಂಗಣ್ಣ, ಕಲ್ಲಹಳ್ಳಿ ದೇವರಾಜು, ಕನ್ನಡಪರ ಸಂಘಟನೆಯ ಧನಿಯಾಕುಮಾರ್ , ಬಾ..ಹ ರಮಾಕುಮಾರಿ ಸೇರಿ ಹಲವಾರು ಮಂದಿ ಭಾಗಿಯಾಗಿದ್ರು. ಬೃಹತ್ ಕಾರ್ಯಕ್ರಮಕ್ಕಾಗಿ ಈಗಾಗಲೇ ಬೃಹತ್ ಪೆಂಡಾಲ್ ಹಾಕಲಾಗಿದೆ. ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಪಾರ್ಕಿಂಗ್ ಸೇರಿ ಹಲವು ವ್ಯವಸ್ಥೆಯನ್ನು ಮಾಡಿಕೊಳ್ಳಲಾಗ್ತಿದೆ.
ಈ ವೇಳೆ ಮಾತನಾಡಿದ ಎಂಎಲ್ಸಿ ರಾಜೇಂದ್ರ ರಾಜಣ್ಣ, ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಪಕ್ಷಾತೀತವಾಗಿ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ರಾಜಣ್ಣ ಅಭಿಮಾನಿಗಳು ಆಗಮಿಸಲಿದ್ದು, ಯಾವುದೇ ತೊಂದ್ರೆ ಆಗದಂತೆ ನೋಡಿಕೊಳ್ಳಲು ಎಸ್ಪಿ ಬಳಿ ಚರ್ಚಿಸಲಾಗಿದೆ ಎಂದ್ರು. ಅಲ್ದೇ ಬರುವಂತಹ ಎಲ್ಲ ಜನರಿಗೂ ಸರಿಯಾದ ಊಟ, ನೀರಿನ ವ್ಯವಸ್ಥೆ ಆಗುವಂತೆ ನೋಡಿಕೊಳ್ಳಲಾಗಿದೆ ಎಂದು ರಾಜೇಂದ್ರ ರಾಜಣ್ಣ ತಿಳಿಸಿದರು.
ಇನ್ನು ತುಮಕೂರಿನ ಇತಿಹಾಸದಲ್ಲಿ ಬೃಹತ್ ಕಾರ್ಯಕ್ರಮವನ್ನು ಮಾಡಲಾಗ್ತಿದ್ದು, ಬೃಹತ್ ಪೆಂಡಾಲ್ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಜಿಲ್ಲೆಯಿಂದಲೂ ಜನರು ಆಗಮಿಸ್ತಾ ಇದ್ದು, ಸುಮಾರು 40 ರಿಂದ 50 ಸಾವಿರ ಮಂದಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಒಟ್ಟಿನಲ್ಲಿ 2005ರಲ್ಲಿ ತುಮಕೂರಿನಲ್ಲಿ ನಡೆದ ಅಹಿಂದ ಸಮಾವೇಶಕ್ಕಿಂತಲೂ ಚೆನ್ನಾಗಿ ಸಮಾರಂಭ ಮಾಡಲು ಕೆಎನ್ ಆರ್ ಅಭಿಮಾನಿಗಳು ಸಜ್ಜಾಗಿದ್ದು, ಕಾರ್ಯಕ್ರಮಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ದಾರೆ. ಅಲ್ದೇ ಈ ಕಾರ್ಯಕ್ರಮದ ಮೂಲಕ ತುಮಕೂರು ಹೊಸ ಇತಿಹಾಸ ಸೃಷ್ಟಿಯಾಗುತ್ತಾ ಎಂದು ಕಾದು ನೋಡಬೇಕಿದೆ.