Tumakuru : ಆರ್ ಸಿಬಿ ಸಂಭ್ರಮಾಚರಣೆ ವೇಳೆ ದುರಂತ | ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಆಕ್ರೋಶ

TUMAKURU : ಆರ್‌ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತ ಪ್ರಕರಣಕ್ಕೆ ಮೈತ್ರಿ ನಾಯಕರು ಕಿಡಿ ಕಾರುತ್ತಿದ್ದಾರೆ. ಇಂದು ಕೂಡ ತುಮಕೂರಿನಲ್ಲಿ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ನಗರದ ಟೌನ್‌ ಹಾಲ್‌ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

ಟೌನ್ ಹಾಲ್ ಸರ್ಕಲ್‌ನಲ್ಲಿ‌ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭಾವ ಚಿತ್ರವನ್ನು ಪ್ರತಿಭಟನಾಕಾರರು ಸುಟ್ಟಿ, ಕೂಡಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ರಾಜೀನಾಮೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಶಾಸಕ ಸುರೇಶ್‌ ಗೌಡ, ಸರ್ಕಾರದ ನಿರ್ಲಕ್ಷ್ಯದಿಂದ 11 ಮಂದಿ ಆರ್‌ ಸಿಬಿ ಅಭಿಮಾನಿಗಳ ಸಾವಾಗಿದೆ, ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ಒಟ್ಟಿನಲ್ಲಿ ಆರ್‌ ಸಿಬಿ ಸಂಭ್ರಮಾಚರಣೆ ದುರಂತ ನಡೆದು ಸುಮಾರು ದಿನಗಳೇ ಕಳೆದರೂ ಮೈತ್ರಿ ನಾಯಕರ ಪ್ರತಿಭಟನೆ ಮಾತ್ರ ನಿಲ್ಲತ್ತಾ ಇಲ್ಲ, ದುರಂತದ ಬಗ್ಗೆ ರಾಜಕೀಯ ಹಗ್ಗ- ಜಗ್ಗಾಟ ತಾರಕಕ್ಕೇರುತ್ತಿದ್ದು ಮುಂದಿನ ದಿನಗಳಲ್ಲಿ ಯಾವ ರೀತಿ ತಿರುವು ಪಡೆಯುತ್ತೆ ಎಂದು ಕಾದು ನೋಡಬೇಕಿದೆ.

Author:

...
Sushmitha N

Copy Editor

prajashakthi tv

share
No Reviews