ತುಮಕೂರು : ಖಾಲಿ ಸೈಟ್ ವಿಚಾರಕ್ಕೆ ದಾಯಾದಿಗಳ ನಡುವೆ ಗಲಾಟೆ..!

ತುಮಕೂರು : ಇತ್ತೀಚೆಗೆ ಹಣ, ಆಸ್ತಿಯ ಮುಂದೆ ಸಂಬಂಧಗಳಿಗೇ ಬೆಲೆಯೇ ಇಲ್ಲದಂತಾಗಿದೆ. ಹೆಣ್ಣು, ಹೊನ್ನು, ಮಣ್ಣಿಗಾಗಿ ರಕ್ತಸಂಬಂಧಿಗಳ ಜೀವವನ್ನೂ ತೆಗೆಯೋದಕ್ಕೆ ಪಾಪಿಗಳು ಹಿಂಜರಿಯುತ್ತಿಲ್ಲ. ಇದೀಗ ಇಂಥದ್ದೇ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ತುಮಕೂರು ತಾಲೂಕಿನ ಕೋರಾ ಬಳಿಯ ರಾಮಗೊಂಡನಹಳ್ಳಿಯಲ್ಲಿ ನಡೆದಿರುವ ಘಟನೆಯಿದು. ರಾಮಗೊಂಡನಹಳ್ಳಿ ಗ್ರಾಮದ ಹನುಮಂತರಾಯಪ್ಪ ಮತ್ತು ರವಿ ಎಂಬುವವರ ಮನೆಯವರ ನಡುವೆ ಖಾಲಿ ಸೈಟ್‌ನ ವಿಚಾರವೊಂದಕ್ಕೆ ಆಗಾಗ್ಗೆ ಗಲಾಟೆ ನಡೆಯುತ್ತಿದ್ದು,. ಇವರಿಬ್ಬರು ದೊಡ್ಡಪ್ಪ, ಚಿಕ್ಕಪ್ಪನ ಮಕ್ಕಳಾಗಿದ್ದು ಸೈಟ್‌ ವಿಚಾರಕ್ಕೆ ಎರಡೂ ಕುಟುಂಬಗಳ ನಡುವೆ ವೈಮನಸ್ಸು ಶುರುವಾಗಿದೆ. ಇದೇ ವಿಚಾರವಾಗಿ ನಿನ್ನೆ ಕೂಡ ಗಲಾಟೆ ನಡೆದಿದ್ದು, ಈ ವೇಳೆ ರವಿ ಎಂಬಾತ ಏಕಾಏಕಿ ಹನುಮಂತರಾಯಪ್ಪ ಪತ್ನಿ ಭಾಗ್ಯಮ್ಮ ಹೊಟ್ಟೆಗೆ ಚಾಕುವಿನಿಂದ ಮೂರು ಬಾರಿ ಚುಚ್ಚಿ ಹಲ್ಲೆಗೊಳಿಸಿದ್ದಾನೆ. ಚಾಕುವಿನಿಂದ ಹಲ್ಲೆ ಮಾಡ್ತಿದ್ದಂತೆ ಭಾಗ್ಯಮ್ಮ ಕೆಳಗೆ ಬಿದ್ದಿದ್ದು, ಹಲ್ಲೆ ನಡೆಸಿದ ರವಿ ಅಲ್ಲಿಂದ ಪರಾರಿಯಾಗಿದ್ದಾನೆ.

ತಕ್ಷಣವೇ ಸ್ಥಳೀಯರು ಓಡಿ ಹೋಗಿ, ಅಂಬುಲೆನ್ಸ್‌ಗೆ ಕರೆಸಿ ಭಾಗ್ಯಮ್ಮಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದ್ರೆ ಮೂರು ಬಾರಿ ಚಾಕುವಿನಿಂದ ಇರಿದಿದ್ದ ಪರಿಣಾಮ ಭಾಗ್ಯಮ್ಮಗೆ ಗಂಭೀರ ಗಾಯವಾಗಿದ್ದ ಕಾರಣ, ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.    

ಒಟ್ಟಿನಲ್ಲಿ ಒಂದು ಖಾಲಿ ಸೈಟ್‌ನ ವಿಚಾರಕ್ಕೆ ನಡೆದ ಗಲಾಟೆಯಿಂದ ಸದ್ಯ ಭಾಗ್ಯಮ ಸಾವು-ಬದುಕಿನ ನಡುವೆ ಹೋರಾಡುವಂತಾಗಿದೆ. ಪ್ರಕರಣ ಸಂಬಂಧ ಸದ್ಯ ಕೋರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆಬೀಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews