ಮಂಗಳೂರು : ಮಂಗಳೂರಿನಲ್ಲಿ ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತೀರ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭೀಕರ ಕಡಲ ದುರ್ಘಟನೆಗೆ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ. ತೀವ್ರ ಮಳೆ ಹಾಗೂ ಕಡಲ ಅಬ್ಬರದ ನಡುವೆಯೇ ಮತ್ಸ್ಯಗಾರಿಕೆ ನಡೆಸುತ್ತಿದ್ದ ನಾಡದೋಣಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಈ ಘಟನೆ ಮಂಗಳೂರು ಕಡಲತೀರದ ತೋಟಬೆಂಗ್ರೆ ಅಳಿವೆ ಬಾಗಿಲು ಪ್ರದೇಶದಲ್ಲಿ ನಡೆದಿದೆ. ನೀರಿನಲ್ಲಿ ಕಣ್ಮರೆಯಾಗಿರುವ ಮೀನುಗಾರರನ್ನು ಯಶವಂತ ಮತ್ತು ಕಮಲಾಕ್ಷ ಎಂದು ಗುರುತಿಸಲಾಗಿದೆ. ಇಬ್ಬರೂ ತೋಟಬೆಂಗ್ರೆ ನಿವಾಸಿಗಳಾಗಿದ್ದಾರೆ.

ಮೀನುಗಾರಿಕೆಗಾಗಿ ನದಿಗೆ ತೆರಳಿದ್ದ ಈ ಇಬ್ಬರೂ, ಅಲೆಗಳ ಅಬ್ಬರಕ್ಕೆ ನಾಡದೋಣಿಯ ಸಮತೋಲನ ತಪ್ಪಿ ಪಲ್ಟಿಯಾದ ಪರಿಣಾಮ ನೀರಿಗೆ ಆಳವಾಗಿ ಬಿದ್ದಿದ್ದಾರೆ. ಈ ವೇಳೆ ಆವರಣದಲ್ಲಿದ್ದ ಇತರರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಧಾವಿಸಿದರೂ, ಇಬ್ಬರೂ ಮೀನುಗಾರರು ನೀರಿನಲ್ಲಿ ಕಣ್ಮರೆಯಾಗಿದ್ದಾರೆ.

ಇನ್ನು ಘಟನೆಯ ಬಳಿಕ ಸ್ಥಳೀಯ ಮೀನುಗಾರರು, ನೌಕಾಪಡೆ (Coast Guard) ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಡದೋಣಿಯ ಅವಶೇಷಗಳು ಈಗ ಕಡಲತೀರದಲ್ಲಿ ಪತ್ತೆಯಾಗಿದ್ದು, ಅದು ಅಲೆಗಳೊಂದಿಗೆ ಎಸೆದು ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ, ಭಾರೀ ಮಳೆ ಮತ್ತು ಕಡಲಬ್ಬರದ ಹಿನ್ನೆಲೆ, ಮೀನುಗಾರರಿಗೆ ತಾತ್ಕಾಲಿಕವಾಗಿ ಕಡಲ ಪ್ರವೇಶಿಸದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews