ಬಾಗಲಕೋಟೆ : ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನಲ್ಲಿ ನಡೆದ ದುರಂತ ಅಪಘಾತದಲ್ಲಿ ತಂದೆ ಮತ್ತು ಮಗಳು ದುರ್ಮರಣಕ್ಕೀಡಾಗಿರುವ ನಡೆದಿದೆ. ದೇವಾಲಯಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಇನ್ನು ಈ ಘಟನೆ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಬಳಿ ನಡೆದಿದೆ. ಬೈಕ್ನಲ್ಲಿ ದೇವಾಲಯಕ್ಕೆ ಹೋಗುತ್ತಿದ್ದ ವೇಳೆ, ಅಪರಿಚಿತ ವಾಹನದ ಡಿಕ್ಕಿಯಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬಸವರಾಜ ಬಂಡಿವಡ್ಡರ್ (26) ಮತ್ತು ಅವರ ಮಗಳು ಹುಲಿಗೆಮ್ಮ (3) ಎಂದು ಗುರುತಿಸಲಾಗಿದೆ. ಮೃತರು ಕುಟುಂಸ್ಕರರೊಂದಿಗೆ ದೇವಾಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಈ ದುರಂತ ಸಂಭವಿಸಿದೆ.
ಅಪಘಾತದ ನಂತರ ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪರಿಚಿತ ವಾಹನದ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ. ಈ ದುರ್ಘಟನೆಗೆ ಸ್ಥಳೀಯರಲ್ಲಿ ಆಘಾತದ ವಾತಾವರಣವಿದ್ದು, ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.