ಉಡುಪಿ : ಕರಾವಳಿಯಲ್ಲಿ ಮಳೆ ಅಬ್ಬರ | ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಉಡುಪಿ : ಕರಾವಳಿಯಲ್ಲಿ ಮಳೆ ಅಬ್ಬರ ಮತ್ತಷ್ಟು ಹೆಚ್ಚಿದ್ದು, ಉಡುಪಿಯಲ್ಲಿ ತೀವ್ರ ಹವಾಮಾನ ಪರಿಸ್ಥಿತಿಯಿಂದ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಗಾಳಿಯ ಅಬ್ಬರದ ಪರಿಣಾಮ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ನಾಲ್ಕು ತಾಲೂಕುಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದೆ.

ಜಿಲ್ಲೆಯಲ್ಲಿ 55 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿರುವ ಬಲಿಷ್ಠ ಗಾಳಿ, ಕಡಲತೀರದ ಪ್ರದೇಶಗಳಲ್ಲಿ ಅತೀವ ಆತಂಕ ಸೃಷ್ಟಿಸಿದೆ. ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ತಾಲೂಕುಗಳಲ್ಲಿ ಪವರ್‌ ಕಟ್ ಜಾರಿಗೆ ತರಲಾಗಿದ್ದು, ಸಾರ್ವಜನಿಕರಿಂದ ಅನಗತ್ಯವಾಗಿ ಹೊರಬರದಂತೆ ಸೂಚನೆ ನೀಡಲಾಗಿದೆ.

ಮಳೆ ಹಾಗೂ ಗಾಳಿಯ ಪರಿಣಾಮವಾಗಿ ಕಡಲ ತೀರದ ಪ್ರದೇಶಗಳಲ್ಲಿ ಉಕ್ಕಿಯಾಡುತ್ತಿರುವ ಮೀನುಗಾರ ಬೋಟುಗಳು ಹಾಗೂ ಮನೆಗಳಿಗೆ ನೀರು ನುಗ್ಗುವ ಪರಿಸ್ಥಿತಿ ಉಂಟಾಗಿದೆ. ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆಗೆ ಸ್ಥಳೀಯ ಆಡಳಿತ ಸಿದ್ಧತೆ ಮಾಡಿದೆ. ತುರ್ತು ಸನ್ನಾಹ ಕ್ರಮವಾಗಿ ಅನೇಕ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನದಿಗೆ ಹತ್ತಿ ಹೋಗುವ ಅಥವಾ ಕಡಲತೀರದಲ್ಲಿ ವಾಸಿಸುವವರಿಗೆ ಸ್ಥಳಾಂತರ ಸೂಚನೆ ನೀಡಲಾಗಿದೆ. ಜಿಲ್ಲಾಡಳಿತದಿಂದ ಈಗಾಗಲೇ  ರೆಸ್ಕ್ಯೂ ತಂಡಗಳು, ಆಯಾ ಪ್ರದೇಶಗಳಲ್ಲಿ ನಿಯೋಜನೆಯಾಗಿವೆ.

 

 

 

Author:

...
Sushmitha N

Copy Editor

prajashakthi tv

share
No Reviews