GUBBI NEWS : ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಮುದಿಗೆರೆ ಗ್ರಾಮದ ರಸ್ತೆ ಪಕ್ಕದ ಚಿಕ್ಕಕಟ್ಟೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ನೀರಿನಲ್ಲಿ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನೀರಿನಲ್ಲಿ ತೇಲುತ್ತಿದ್ದ ಶವ ಕಂಡ ಸಾರ್ವಜನಿಕರು ಶಾಕ್ ಆಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಬರುವ ಗಂಟೆ ಬಸವಣ್ಣ ಸ್ವಾಮಿಯ ದೇಗುಲದ ಮುಂದಿನ ಗ್ರಾಮವಾದ ಮುದಿಗೆರೆ ಗ್ರಾಮದ ರಸ್ತೆ ಪಕ್ಕದ ಕಟ್ಟೆಯೊಂದರಲ್ಲಿ ಶವ ಪತ್ತೆಯಾಗಿದೆ. ಇನ್ನು ನೀರಿನಲ್ಲಿ ತೇಲುತ್ತಿದ್ದ ಶವ ಕಂಡ ಸಾರ್ವಜನಿಕರು ಗುಬ್ಬಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ರು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಕಟ್ಟೆಯ ಮದ್ಯೆ ಕಾಣಿಸಿರುವ ಶವವನ್ನು ಮೇಲಕ್ಕೆತ್ತಲು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿಯವರು ಬಿಳಿ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುವ ವ್ಯಕ್ತಿ ನೀರಿನಿಂದ ಮೇಲಕ್ಕೆತ್ತಿದರು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗೆ ಮುಂದಾಗಿದ್ದಾರೆ.